IAS Vs IPS: ರೋಹಿಣಿ ಸಿಂಧೂರಿ ವಿರುದ್ಧ ಡಿ ರೂಪಾ ಮಾಡಿರುವ ಆರೋಪಗಳು ಪ್ರಸ್ತುತ ಮತ್ತು ಆಧಾರಸಹಿತವಾಗಿವೆ: ಪ್ರತಾಪ್ ಸಿಂಹ, ಸಂಸದ

ಅರುಣ್​ ಕುಮಾರ್​ ಬೆಳ್ಳಿ

Updated on: Feb 20, 2023 | 6:21 PM

ರೂಪಾ ಮಾಡಿರುವ ಆರೋಪಗಳ ಸತ್ಯಾಸತ್ಯತೆಯನ್ನು ಮಾಧ್ಯಮವರು ಪತ್ತೆ ಮಾಡಬೇಕೆಂದು ಹೇಳಿದ ಸಂಸದರು, ಐಪಿಎಸ್ ಅಧಿಕಾರಿಯು ರೋಹಿಣಿಯವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತಾಡುತ್ತಿರುವ ಬಗ್ಗೆ ಜಾಣ ಕುರುಡು, ಕಿವುಡು ಎರಡನ್ನೂ ಪ್ರದರ್ಶಿಸುತ್ತಾರೆ.

ಮೈಸೂರು: ಐಪಿಎಸ್ ಅಧಿಕಾರಿ ಡಿ ರೂಪಾ (D Roopa) ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಮಾಡಿರುವ ಆಪಾದನೆಗಳು ಅತ್ಯಂತ ಪ್ರಸ್ತುತವಾಗಿವೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ. ಮೈಸೂರಲ್ಲಿಂದು ಮಾಧ್ಯಮ ಗೋಷ್ಟಿಯನ್ನು ಉದ್ದೇಶಿಸಿ ಮಾತಾಡಿದ ಸಂಸದರು ಹಿಂದೆ ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಜನ ಸತ್ತ ಸಂಗತಿಯನ್ನು ಸಹ ರೂಪಾ ತಮ್ಮ ಆರೋಪಗಳಲ್ಲಿ ಉಲ್ಲೇಖಿಸಿದ್ದಾರೆ. ರೂಪಾ ಮಾಡಿರುವ ಆರೋಪಗಳ ಸತ್ಯಾಸತ್ಯತೆಯನ್ನು ಮಾಧ್ಯಮವರು ಪತ್ತೆ ಮಾಡಬೇಕೆಂದು ಹೇಳಿದ ಸಂಸದರು, ಐಪಿಎಸ್ ಅಧಿಕಾರಿಯು ರೋಹಿಣಿಯವರ ವೈಯಕ್ತಿಕ ವಿಷಯಗಳ ಬಗ್ಗೆ ಮಾತಾಡುತ್ತಿರುವ ಬಗ್ಗೆ ಜಾಣ ಕುರುಡು, ಕಿವುಡು ಎರಡನ್ನೂ ಪ್ರದರ್ಶಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.