AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಸಾವಿರ ರೂ. ಬೆಲೆಬಾಳುವ ಲ್ಯಾಪ್​ಟಾಪ್ 60 ಸಾವಿರಕ್ಕೆ ಖರೀದಿ.. ಅವ್ಯವಹಾರಕ್ಕೆ ಬಿತ್ತು ಬ್ರೇಕ್​

[lazy-load-videos-and-sticky-control id=”iMAUbXJHcMQ”]] ಬೆಂಗಳೂರು: ವಿದ್ಯಾರ್ಥಿಗಳ ಆನ್​ಲೈನ್ ಕ್ಲಾಸ್‌ಗಾಗಿ ಅನುಕೂಲವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿತ್ತು. ಆದರೆ ಲ್ಯಾಪ್​ಟಾಪ್ ಖರೀದಿಯಲ್ಲಿ ಭಾರಿ ಅವ್ಯವಹಾರ ಕಂಡುಬಂದಿದ್ದರಿಂದ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖರೀದಿಗೆ ತಡೆ ನೀಡಿದ್ದಾರೆ. ರಸ್ತೆ, ರಾಜಕಾಲುವೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ವಿದ್ಯಾರ್ಥಿಗಳ ಆನ್​ಲೈನ್ ತರಗತಿಗಳಿಗೆ ಸಹಾಯವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿ ಮಾಡಲು ಮುಂದಾಗಿತ್ತು. ಹೀಗಾಗಿ 115 ಕೋಟಿ ರೂಪಾಯಿ ಅಭಿವೃದ್ಧಿ ಹಣದಲ್ಲಿ KEONICS ಸಂಸ್ಥೆಯಿಂದ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿದ್ದ ಬಿಬಿಎಂಪಿ, 30ರಿಂದ 35 […]

35 ಸಾವಿರ ರೂ. ಬೆಲೆಬಾಳುವ ಲ್ಯಾಪ್​ಟಾಪ್ 60 ಸಾವಿರಕ್ಕೆ ಖರೀದಿ.. ಅವ್ಯವಹಾರಕ್ಕೆ ಬಿತ್ತು ಬ್ರೇಕ್​
ಸಾಧು ಶ್ರೀನಾಥ್​
|

Updated on:Aug 23, 2020 | 2:51 PM

Share

[lazy-load-videos-and-sticky-control id=”iMAUbXJHcMQ”]]

ಬೆಂಗಳೂರು: ವಿದ್ಯಾರ್ಥಿಗಳ ಆನ್​ಲೈನ್ ಕ್ಲಾಸ್‌ಗಾಗಿ ಅನುಕೂಲವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿತ್ತು. ಆದರೆ ಲ್ಯಾಪ್​ಟಾಪ್ ಖರೀದಿಯಲ್ಲಿ ಭಾರಿ ಅವ್ಯವಹಾರ ಕಂಡುಬಂದಿದ್ದರಿಂದ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖರೀದಿಗೆ ತಡೆ ನೀಡಿದ್ದಾರೆ.

ರಸ್ತೆ, ರಾಜಕಾಲುವೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ವಿದ್ಯಾರ್ಥಿಗಳ ಆನ್​ಲೈನ್ ತರಗತಿಗಳಿಗೆ ಸಹಾಯವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿ ಮಾಡಲು ಮುಂದಾಗಿತ್ತು. ಹೀಗಾಗಿ 115 ಕೋಟಿ ರೂಪಾಯಿ ಅಭಿವೃದ್ಧಿ ಹಣದಲ್ಲಿ KEONICS ಸಂಸ್ಥೆಯಿಂದ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿದ್ದ ಬಿಬಿಎಂಪಿ, 30ರಿಂದ 35 ಸಾವಿರ ರೂಪಾಯಿ ಬೆಲೆಬಾಳುವ ಲ್ಯಾಪ್​ಟಾಪ್​ಗೆ, 60 ಸಾವಿರ ರೂಪಾಯಿ ನೀಡಿ ಖರೀದಿಸಲು ಮುಂದಾಗಿತ್ತು ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈ ಬಗ್ಗೆ ಸಿಎಂ ಯಡಿಯೂರಪ್ಪರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅಭಿವೃದ್ಧಿ ಹಣದಲ್ಲಿ ಲ್ಯಾಪ್​ಟಾಪ್ ಖರೀದಿಯ ಅವಶ್ಯಕತೆ ಇಲ್ಲ. ಈ ರೀತಿಯ ದುಂದು ವೆಚ್ಚಕ್ಕೆ ಬ್ರೇಕ್ ಹಾಕುವಂತೆ ಸಿಎಂಗೆ ಮನವರಿಕೆ ಮಾಡಿದ್ದಾರೆ.

ಆಯುಕ್ತರ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಲ್ಯಾಪ್ ಟಾಪ್ ಖರೀದಿ ಮಾಡಲೇಬೇಕು ಎಂದು ಪಟ್ಟು ಹಿಡಿದಿರುವ ಕಾರ್ಪೋರೇಟರ್ಸ್ ಲ್ಯಾಪ್ ಟಾಪ್ ಖರೀದಿ ಮಾಡಿ ಅಥವಾ ಆನ್​ಲೈನ್ ಕ್ಲಾಸ್ ರದ್ದು ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಸರ್ಕಾರದ ಸೂಚನೆಯಂತೆ ಲ್ಯಾಪ್ ಟಾಪ್ ಖರೀದಿ ಮಾಡದಂತೆ ಜಂಟಿ ಆಯುಕ್ತರಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೂಚನೆ ನೀಡಿದ್ದಾರೆ.

Published On - 12:02 pm, Sun, 23 August 20

Follow Us
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ