AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಸಾವಿರ ರೂ. ಬೆಲೆಬಾಳುವ ಲ್ಯಾಪ್​ಟಾಪ್ 60 ಸಾವಿರಕ್ಕೆ ಖರೀದಿ.. ಅವ್ಯವಹಾರಕ್ಕೆ ಬಿತ್ತು ಬ್ರೇಕ್​

[lazy-load-videos-and-sticky-control id=”iMAUbXJHcMQ”]] ಬೆಂಗಳೂರು: ವಿದ್ಯಾರ್ಥಿಗಳ ಆನ್​ಲೈನ್ ಕ್ಲಾಸ್‌ಗಾಗಿ ಅನುಕೂಲವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿತ್ತು. ಆದರೆ ಲ್ಯಾಪ್​ಟಾಪ್ ಖರೀದಿಯಲ್ಲಿ ಭಾರಿ ಅವ್ಯವಹಾರ ಕಂಡುಬಂದಿದ್ದರಿಂದ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖರೀದಿಗೆ ತಡೆ ನೀಡಿದ್ದಾರೆ. ರಸ್ತೆ, ರಾಜಕಾಲುವೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ವಿದ್ಯಾರ್ಥಿಗಳ ಆನ್​ಲೈನ್ ತರಗತಿಗಳಿಗೆ ಸಹಾಯವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿ ಮಾಡಲು ಮುಂದಾಗಿತ್ತು. ಹೀಗಾಗಿ 115 ಕೋಟಿ ರೂಪಾಯಿ ಅಭಿವೃದ್ಧಿ ಹಣದಲ್ಲಿ KEONICS ಸಂಸ್ಥೆಯಿಂದ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿದ್ದ ಬಿಬಿಎಂಪಿ, 30ರಿಂದ 35 […]

35 ಸಾವಿರ ರೂ. ಬೆಲೆಬಾಳುವ ಲ್ಯಾಪ್​ಟಾಪ್ 60 ಸಾವಿರಕ್ಕೆ ಖರೀದಿ.. ಅವ್ಯವಹಾರಕ್ಕೆ ಬಿತ್ತು ಬ್ರೇಕ್​
ಸಾಧು ಶ್ರೀನಾಥ್​
|

Updated on:Aug 23, 2020 | 2:51 PM

Share

[lazy-load-videos-and-sticky-control id=”iMAUbXJHcMQ”]]

ಬೆಂಗಳೂರು: ವಿದ್ಯಾರ್ಥಿಗಳ ಆನ್​ಲೈನ್ ಕ್ಲಾಸ್‌ಗಾಗಿ ಅನುಕೂಲವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿತ್ತು. ಆದರೆ ಲ್ಯಾಪ್​ಟಾಪ್ ಖರೀದಿಯಲ್ಲಿ ಭಾರಿ ಅವ್ಯವಹಾರ ಕಂಡುಬಂದಿದ್ದರಿಂದ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖರೀದಿಗೆ ತಡೆ ನೀಡಿದ್ದಾರೆ.

ರಸ್ತೆ, ರಾಜಕಾಲುವೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ವಿದ್ಯಾರ್ಥಿಗಳ ಆನ್​ಲೈನ್ ತರಗತಿಗಳಿಗೆ ಸಹಾಯವಾಗಲೆಂದು ಬಿಬಿಎಂಪಿ ಲ್ಯಾಪ್​ಟಾಪ್ ಖರೀದಿ ಮಾಡಲು ಮುಂದಾಗಿತ್ತು. ಹೀಗಾಗಿ 115 ಕೋಟಿ ರೂಪಾಯಿ ಅಭಿವೃದ್ಧಿ ಹಣದಲ್ಲಿ KEONICS ಸಂಸ್ಥೆಯಿಂದ ಲ್ಯಾಪ್​ಟಾಪ್ ಖರೀದಿಗೆ ಮುಂದಾಗಿದ್ದ ಬಿಬಿಎಂಪಿ, 30ರಿಂದ 35 ಸಾವಿರ ರೂಪಾಯಿ ಬೆಲೆಬಾಳುವ ಲ್ಯಾಪ್​ಟಾಪ್​ಗೆ, 60 ಸಾವಿರ ರೂಪಾಯಿ ನೀಡಿ ಖರೀದಿಸಲು ಮುಂದಾಗಿತ್ತು ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈ ಬಗ್ಗೆ ಸಿಎಂ ಯಡಿಯೂರಪ್ಪರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ಅಭಿವೃದ್ಧಿ ಹಣದಲ್ಲಿ ಲ್ಯಾಪ್​ಟಾಪ್ ಖರೀದಿಯ ಅವಶ್ಯಕತೆ ಇಲ್ಲ. ಈ ರೀತಿಯ ದುಂದು ವೆಚ್ಚಕ್ಕೆ ಬ್ರೇಕ್ ಹಾಕುವಂತೆ ಸಿಎಂಗೆ ಮನವರಿಕೆ ಮಾಡಿದ್ದಾರೆ.

ಆಯುಕ್ತರ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಲ್ಯಾಪ್ ಟಾಪ್ ಖರೀದಿ ಮಾಡಲೇಬೇಕು ಎಂದು ಪಟ್ಟು ಹಿಡಿದಿರುವ ಕಾರ್ಪೋರೇಟರ್ಸ್ ಲ್ಯಾಪ್ ಟಾಪ್ ಖರೀದಿ ಮಾಡಿ ಅಥವಾ ಆನ್​ಲೈನ್ ಕ್ಲಾಸ್ ರದ್ದು ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ಸರ್ಕಾರದ ಸೂಚನೆಯಂತೆ ಲ್ಯಾಪ್ ಟಾಪ್ ಖರೀದಿ ಮಾಡದಂತೆ ಜಂಟಿ ಆಯುಕ್ತರಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಸೂಚನೆ ನೀಡಿದ್ದಾರೆ.

Published On - 12:02 pm, Sun, 23 August 20

ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಗಿಲ್ಲಿ ನಟನ ಕ್ರೇಜ್ ನೋಡಿ; ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಸ್ಥಗಿತಕ್ಕೆ ಕಾರಣ ಕೊಟ್ಟ ಅಮೆರಿಕ
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ