ಬಿಜೆಪಿಯೊಂದಿಗೆ ಮೈತ್ರಿ ಆಗೋದು ನಿಶ್ಚಿತ, ದೆಹಲಿಗೆ ಹೋಗಿ ಆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಿದ್ದೇನೆ: ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಜೆಡಿಎಸ್ ಯಾಕೆ ಬಿಟ್ಟರು, ಬಿಟ್ಟ ನಂತರ ಯಾವ್ಯಾವ ಪಕ್ಷಗಳ ಕದ ತಟ್ಟಿದರು, ಯಾರ ಮಂತ್ರಿಮಂಡಲದಲ್ಲಿ ಮಂತ್ರಿಯಾಗಲು ಪ್ರಯತ್ನಿಸಿದರು, 2004 ರಲ್ಲಿ ಅವರು ಮಾಡಿದ್ದೇನು, 2008 ರಲ್ಲಿ ಮಾಡಿದ್ದು ಎಲ್ಲ ಇತಿಹಾಸ ತಮ್ಮಲ್ಲಿದೆ ಎಂದು ಕುಮಾರಸ್ವಾಮಿ ಹೇಳಿದರು.

|

Updated on: Sep 13, 2023 | 7:37 PM

ಹಾಸನ: ನಮ್ಮ ರಾಜ್ಯದ ರಾಜಕಾರಣಿಗಳು (state political leaders) ಮಿಮಿಕ್ರಿ ಕಲೆಯಲ್ಲಿ ಪರಿಣಿತಿ ಸಾಧಿಸುತ್ತಿದ್ದಾರೆ ಅಂದರೆ ಆಭಾಸ ಅನಿಸದು. ಪ್ರಮುಖ ನಾಯಕರು ಮಾತಾಡುವಾಗ ತಮ್ಮ ಎದುರಾಳಿ ಪಕ್ಷಗಳ ನಾಯಕರ ಮಿಮಿಕ್ರಿ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ! ಹಾಸನದಲ್ಲಿ ಇಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿಗೆ ನನ್ನ ಹೆಣವೂ ಹೋಗೋದಿಲ್ಲ ಅಂದಿದನ್ನು ಮಿಮಿಕ್ರಿ ಮಾಡುತ್ತಾ ಹೇಳಿದರು. ಮುಂದುವರಿದು ಮಾತಾಡಿದ ಅವರು, ಸಿದ್ದರಾಮಯ್ಯ ಜೆಡಿಎಸ್ ಯಾಕೆ ಬಿಟ್ಟರು, ಬಿಟ್ಟ ನಂತರ ಯಾವ್ಯಾವ ಪಕ್ಷಗಳ ಕದ ತಟ್ಟಿದರು, ಯಾರ ಮಂತ್ರಿಮಂಡಲದಲ್ಲಿ ಮಂತ್ರಿಯಾಗಲು ಪ್ರಯತ್ನಿಸಿದರು, 2004 ರಲ್ಲಿ ಅವರು ಮಾಡಿದ್ದೇನು, 2008 ರಲ್ಲಿ ಮಾಡಿದ್ದು ಎಲ್ಲ ಇತಿಹಾಸ ತಮ್ಮಲ್ಲಿದೆ ಎಂದು ಹೇಳಿದರು. ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ಮಾತಾಡಿದ ಅವರು ಬಹಳ ಬಿರುಸಿನಿಂದ ಮಾತುಕತೆ ನಡೆಯುತ್ತಿವೆ, ಇವತ್ತು ದೆಹಲಿಯಲ್ಲೂ ಚರ್ಚೆ ನಡೆಯುತ್ತಿದೆ, ತಾವು ಸಹ ಅಲ್ಲಿಗೆ ತೆರಳಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದರು. ಬಿಜೆಪಿಯೊಂದಿಗೆ ಮೈತ್ರಿ ಏರ್ಪಡೋದು ನಿಶ್ಚಿತ ಎಂದು ಅವರು ಸ್ಪಷ್ಟಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್