ರಾಜ್ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೆ ನಮಿಸಿದ ಅಲ್ಲು ಅರ್ಜುನ್; ಇಲ್ಲಿದೆ ವಿಡಿಯೋ
ಖಾಸಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದ ಅಲ್ಲು ಅರ್ಜುನ್ ಅವರು ನೇರವಾಗಿ ಶಿವರಾಜ್ಕುಮಾರ್ ಅವರ ಮನೆಗೆ ಆಗಮಿಸಿದರು. ಆ ಬಳಿಕ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಸಾಂತ್ವನ ಹೇಳಿದರು.
ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ಕಳೆದುಕೊಂಡಿದ್ದು ಕೋಟ್ಯಂತರ ಜನರಿಗೆ ನೋವು ತಂದಿದೆ. ಅವರ ಸಮಾಧಿ ದರ್ಶನ ಪಡೆಯೋಕೆ ಈಗಲೂ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಪುನೀತ್ಗೆ ನಮನ ಸಲ್ಲಿಸುವ ಉದ್ದೇಶದಿಂದ ಅಲ್ಲು ಅರ್ಜುನ್ (Allu Arjun) ಅವರು ಇಂದು (ಫೆಬ್ರವರಿ 3) ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದ ಅವರು ನೇರವಾಗಿ ಶಿವರಾಜ್ಕುಮಾರ್ ಅವರ ಮನೆಗೆ ಆಗಮಿಸಿದರು. ಆ ಬಳಿಕ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಸಾಂತ್ವನ ಹೇಳಿದರು. ನಂತರ ನೇರವಾಗಿ ಅವರು ತೆರಳಿದ್ದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ (Puneeth Rajkumar Samadhi). ಅಲ್ಲಿ ಅಪ್ಪುಗೆ ಪುಷ್ಪ ನಮನ ಸಲ್ಲಿಸಿರು ಅವರು. ಆ ಬಳಿಕ ರಾಜ್ಕುಮಾರ್ ಹಾಗೂ ಪಾರ್ವತಮ್ಮ ಸಮಾಧಿಗೂ ಅಲ್ಲು ಅರ್ಜುನ್ ನಮಿಸಿದರು.
ಇದನ್ನೂ ಓದಿ: Allu Arjun: ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು
ಪುನೀತ್ಗೆ ಅಲ್ಲು ಅರ್ಜುನ್ ಪುಷ್ಪ ನಮನ; ಅಪ್ಪು ಜತೆ ಕೊನೇ ಬಾರಿ ಮಾತನಾಡಿದ್ದನ್ನು ನೆನಪಿಸಿಕೊಂಡ ಸ್ಟೈಲಿಷ್ ಸ್ಟಾರ್
Published on: Feb 03, 2022 02:45 PM
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

