ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ: 14 ಕ್ರಸ್ಟ್ ಗೇಟ್‌ಗಳು ಓಪನ್​​

Edited By:

Updated on: Jul 24, 2026 | 12:36 PM

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಗೆ ಮಹಾರಾಷ್ಟ್ರ ಮತ್ತು ಕೃಷ್ಣಾ ಕಣಿವೆಯ ಉತ್ತಮ ಮಳೆಯಿಂದ ಜೀವಕಳೆ ಬಂದಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನ 14 ಕ್ರಸ್ಟ್ ಗೇಟ್‌ಗಳನ್ನು ಈ ವರ್ಷದಲ್ಲಿ ಮೊದಲ ಬಾರಿಗೆ ತೆರೆಯಲಾಗಿದ್ದು, ಜಲಾಶಯಕ್ಕೆ 73,162 ಕ್ಯೂಸೆಕ್ ಒಳಹರಿವು ದಾಖಲಾಗಿದೆ. 43,567 ಕ್ಯೂಸೆಕ್ ನೀರನ್ನು ಬಸವಸಾಗರಕ್ಕೆ ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ವಿಜಯಪುರ, ಜುಲೈ 24: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮತ್ತೆ ಜೀವಕಳೆ ಬಂದಿದ್ದು, ಆಲಮಟ್ಟಿ ಡ್ಯಾಂ ಭರ್ತಿಗೆ ಕೇವಲ 1.02 ಮೀಟರ್ ಬಾಕಿ ಉಳಿದಿದೆ. ಡ್ಯಾಂನಲ್ಲಿ 518.58 ಮೀಟರ್ ನೀರು ಸಂಗ್ರಹವಾಗಿದ್ದು, 73,162 ಕ್ಯೂಸೆಕ್ ಒಳಹರಿವಿದೆ. ಈ ವರ್ಷದ ಮೊದಲ ಬಾರಿಗೆ ಆಲಮಟ್ಟಿ ಕ್ರಸ್ಟ್ ಗೇಟ್‌ಗಳನ್ನು ಓಪನ್ ಮಾಡಲಾಗಿದ್ದು, 26 ಗೇಟ್‌ಗಳಲ್ಲಿ 14 ಕ್ರಸ್ಟ್ ಗೇಟ್‌ಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ಕಣಿವೆಯಲ್ಲಿ ಉತ್ತಮ ಮಳೆ ಪರಿಣಾಮ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ನದಿಗೆ ಇಳಿಯದಂತೆ, ಜಾನುವಾರುಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us