CM in distress: ಅಕ್ಕಿ ಜೊತೆ ಜೋಳ ಮತ್ತು ರಾಗಿಯ ದಾಸ್ತಾನು ಕೂಡ ಇಲ್ಲವೆಂದು ಹತಾಷೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Updated on: Jun 24, 2023 | 3:37 PM

ಈ ಬಾರಿ ಮಳೆ ಕೈಕೊಟ್ಟರೆ ತಲೆದೋರಬಹುದಾದ ಸಂಕಷ್ಟವನ್ನು ರಾಜ್ಯ ಸರ್ಕಾರ ಎದುರಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರು: ಅನ್ನಭಾಗ್ಯ ಯೋಜನೆ (Anna Bhagya) ಜಾರಿಗೆ ತಡವಾಗುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಕಳವಳಗೊಳಿಸಿದೆ. ಕೇಂದ್ರ ಮತ್ತು ಅದರ ಏಜೆನ್ಸಿಗಳಿಂದ ಅಕ್ಕಿ ಸಿಗುವ ಭರವಸೆ ಬತ್ತಿ ಹೋಗಿದೆ. ರಾಜ್ಯದಲ್ಲಿ ಅಕ್ಕಿಯ ಜೊತೆ ರಾಗಿ ಮತ್ತು ಜೋಳದ ದಾಸ್ತಾನು ಕೂಡ ಇಲ್ಲ. ಹಳೆ ಮೈಸೂರು ಭಾಗದ ಬಿಪಿಎಲ್ ಕುಟುಂಬಗಳಿಗೆ ತಲಾ 2 ಕೆಜಿ ರಾಗಿ ಮತ್ತು ಉತ್ತರ ಕರ್ನಾಟಕದ ಕುಟುಂಬ ತಲಾ 2 ಕೆಜಿಯಂತೆ ಜೋಳ ವಿತರಿಸಿದರೂ ಕೇವಲ 6 ತಿಂಗಳಿಗಳಿಗೆ ಸಾಕಾಗಿವಷ್ಟು ದಾಸ್ತಾನು (stocks) ಮಾತ್ರ ಇದೆ ಎಂದು ಮುಖ್ಯಮಂತ್ರಿ ಹೇಳಿದರು. ಅಷ್ಟಾಗಿಯೂ ಉಳಿದ 3 ಕೆಜಿ ಅಕ್ಕಿ ವಿತರಿಸಲಾಗದ ಸ್ಥಿತಿಯಲ್ಲಿದ್ದೇವೆ ಅಂತ ಸಿದ್ದರಾಮಯ್ಯ ಹತಾಷೆ ವ್ಯಕ್ತಪಡಿಸಿದರು. ಮುಕ್ತ ಮಾರುಕಟ್ಟೆಯಲ್ಲಿ (open market) ಅಕ್ಕಿ ಕೊಳ್ಳಬೇಕೆಂದರೆ ಅದಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಬೇಕು, ಹಾಗಾಗಿ ಅದಕ್ಕೆ ಸಮಯ ಹಿಡಿಯಲಿದೆ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಈ ಬಾರಿ ಮಳೆ ಕೈಕೊಟ್ಟರೆ ತಲೆದೋರಬಹುದಾದ ಸಂಕಷ್ಟವನ್ನು ರಾಜ್ಯ ಸರ್ಕಾರ ಎದುರಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More