Toll Plaza: ಶಿವಮೊಗ್ಗ-ತುಮಕೂರು ಹೆದ್ದಾರಿಯಲ್ಲೂ ಟೋಲ್ ಸಂಗ್ರಹಣೆ ವಿಚಾರದಲ್ಲಿ ಜಗಳ, ಗಲಾಟೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2023 | 11:27 AM

ತಿಪಟೂರು ತಾಲ್ಲೂಕಿನ ರಜತಾದ್ರಿಯ ಬಳಿಯುರುವ ಟೋಲ್ ಪ್ಲಾಜಾದ ಸಿಬ್ಬಂದಿ ವಾಹನ ಚಾಲಕರೊಬ್ಬರು, ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಟೋಲ್ ಶುಲ್ಕ ಕಲೆಕ್ಟ್ ಮಾಡುತ್ತಿರೋದು ಯಾಕೆ ಅಂತ ವಾದಕ್ಕಿಳಿದರು.

ತುಮಕೂರು: ಟೋಲ್ ಸಂಗ್ರಹಣೆ ಸಂಬಧಿಸಿಂತೆ ಕೇವಲ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾಗಳಲ್ಲಿ (toll plaza) ಮಾತ್ರ ಜಗಳ ಗಲಾಟೆ ನಡೆಯುತ್ತಿಲ್ಲ. ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲೂ (Shivamogga-Tumakuru) ಅವೇ ಸೀನ್ ಗಳು. ತಿಪಟೂರು ತಾಲ್ಲೂಕಿನ ರಜತಾದ್ರಿ (Rajathadri) ಬಳಿಯುರುವ ಟೋಲ್ ಪ್ಲಾಜಾದ ಸಿಬ್ಬಂದಿ ವಾಹನ ಚಾಲಕರೊಬ್ಬರು, ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಟೋಲ್ ಶುಲ್ಕ ಕಲೆಕ್ಟ್ ಮಾಡುತ್ತಿರೋದು ಯಾಕೆ ಅಂತ ವಾದಕ್ಕಿಳಿದರು. ಅವರೊಬ್ಬರೇ ಮಾತ್ರ ಅಲ್ಲ, ಈ ಟೋಲ್ ಗೇಟ್ ಮುಖಾಂತರ ಹಾದುಹೋಗುವ ವಾಹನ ಸವಾರರೆಲ್ಲ ಟೋಲ್ ಪ್ಲಾಜಾ ಸಿಬ್ಬಂದಿಯೊಂದಿಗೆ ಜಗಳ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.