AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿನ ಒಳಜಗಳಗಳಿಂದ ಬೇಸತ್ತ ಮುಖಂಡರು ಬೇರೆಪಕ್ಷ ನೋಡಿಕೊಂಡರೆ ಆಶ್ಚರ್ಯವಿಲ್ಲ: ಸೋಮಶೇಖರ್

ಬಿಜೆಪಿಯಲ್ಲಿನ ಒಳಜಗಳಗಳಿಂದ ಬೇಸತ್ತ ಮುಖಂಡರು ಬೇರೆಪಕ್ಷ ನೋಡಿಕೊಂಡರೆ ಆಶ್ಚರ್ಯವಿಲ್ಲ: ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 09, 2025 | 4:38 PM

Share

ದ್ವಾರಕಾನಾಥ್ ಗುರೂಜಿಯವರು 30 ವರ್ಷಗಳ ಹಿಂದೆಯೇ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ, ಜೈಲಿಂದ ವಾಪಸ್ಸು ಬಂದ ಬಳಿಕ ಮುಖ್ಯಮಂತ್ರಿಯಾಗುತ್ತಾರೆ ಅಂತ ಭವಿಷ್ಯ ನುಡಿದಿದ್ದರು, ಅವರ ಮಾತನ್ನು ಯಾರೂ ನಂಬಿರಲಿಲ್ಲ, ಶಿವಕುಮಾರ್ ಹಣೇಲಿ ಸಿಎಂ ಆಗುವ ಯೋಗ ಬರೆದಿದ್ದರೆ ಯಾರೂ ಅದನ್ನು ತಪ್ಪಿಸಲಾಗಲ್ಲ ಎಂದು ಶಾಸಕ ಸೋಮಶೇಖರ್ ಹೇಳಿದರು.

ಬೆಂಗಳೂರು: ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗುವ ಬಗ್ಗೆ ಮಾತಾಡುತ್ತಿದ್ದಾರೆ. ಇವತ್ತು ನಗರದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು ಬಿಜೆಪಿಯಲ್ಲಿ ನಡೆಯುತ್ತಿರುವ ಒಳಜಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲ ಸರಿಹೊಗುತ್ತದೆ ಎಂಬ ನಿರೀಕ್ಷೆಯಲ್ಲಿ ಕೆಲ ಬಿಜೆಪಿ ನಾಯಕಯ ದಿನದೂಡುತ್ತಿದ್ದಾರೆ, ಆದರೆ ಸರಿಹೋಗದೆ ಇದ್ದ ಪಕ್ಷದದಲ್ಲಿ ಅವರು ತಮ್ಮ ದಾರಿ ತಾವು ನೋಡಿಕೊಂಡು ಕಾಂಗ್ರೆಸ್ ಇಲ್ಲವೇ ಮತ್ಯಾವುದೋ ಪಕ್ಷಕ್ಕೆ ಸೇರುತ್ತಾರೆ, ಬಿಜೆಪಿಯಲ್ಲಿ ಏನಾಗುತ್ತದೆ, ಕಾಂಗ್ರೆಸ್ ನಲ್ಲಿ ಏನಾಗುತ್ತದೆ ಅನ್ನೋದು ತನಗೆ ಮುಖ್ಯವಲ್ಲ, ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಬೇಕು ಮತ್ತು ಅಲ್ಲಿನ ಸಮಸ್ಯೆಗಳು ನಿವಾರಣೆಯಾಗಬೇಕು, ಅದು ಮಾತ್ರ ತನ್ನ ಗುರಿ ಎಂದು ಸೋಮಶೇಖರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಕ್ರಮ: ವಿಜಯೇಂದ್ರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More