AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah in Bengaluru: ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಉಪಹಾರ ಸೇವಿಸಿದ ಶಾ ರಾಜ್ಯ ನಾಯಕರೊಂದಿಗೆ ಚುನಾವಣಾ ರಣನೀತಿ ಚರ್ಚಿಸಿದರು

Amit Shah in Bengaluru: ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಉಪಹಾರ ಸೇವಿಸಿದ ಶಾ ರಾಜ್ಯ ನಾಯಕರೊಂದಿಗೆ ಚುನಾವಣಾ ರಣನೀತಿ ಚರ್ಚಿಸಿದರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 24, 2023 | 11:12 AM

Share

ಬಿಎಸ್ ವೈ ನಿವಾಸದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ಗೋವಿಂದ ಕಾರಜೋಳ ಜೊತೆ ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಿದರು.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿ ನಗರದ ಖಾಸಗಿ ಹೋಟೆಲೊಂದರಲ್ಲಿ ತಂಗಿದ್ದಾರೆ. ಶುಕ್ರವಾರ ಬೆಳಗ್ಗೆ ಅವರು ಬೆಳಗಿನ ಉಪಹಾರಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮನೆಗೆ ತೆರಳಿದರು. ಈ ಸಂದರ್ಭದಲ್ಲಿ ಬಿಎಸ್ ವೈ ನಿವಾಸದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ (Basavaraj Bommai), ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ನೀರಾವರಿ ಸಚಿವ ಗೋವಿಂದ ಕಾರಜೋಳ ಜೊತೆ ಚುನಾವಣೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಚರ್ಚಿಸಿದರು. ಬಿಎಸ್ ವೈ ಕುಟುಂಬ ಮೂಲಗಳ ಪ್ರಕಾರ, ಉಪಹಾರಕ್ಕೆ ದೋಸೆ, ಇಡ್ಲಿ, ಪೊಂಗಲ್ ಮತ್ತು ಉಪ್ಪಿಟ್ಟು ತಯಾರಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.