ಅಮಿತ್ ಶಾ ಸಂಧಾನ ಸಫಲ, ಮುನಿಸು ಮರೆತು ಮರೆತು ಒಂದಾದ ಎಸ್ ಆರ್ ವಿಶ್ವನಾಥ್ ಮತ್ತು ಡಾ ಕೆ ಸುಧಾಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 03, 2024 | 11:42 AM

ಆದರೆ ಬಿಜೆಪಿಯ ಚಾಣಕ್ಕ ಅಮಿತ್ ಶಾ ನಿನ್ನೆ ಅವರಿಬ್ಬರೊಂದಿಗೆ ಮಾತಾಡಿದ ಪರಿಣಾಮವಾಗಿ ಮುನಿಸು ಅಂತ್ಯಕಂಡಿದೆ. ಇಂದು ಬೆಳ್ಳಂಬೆಳಗ್ಗೆಯೇ ಡಾ ಸುಧಾಕರ್ ಬೋಕೆಯೊಂದಿಗೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ್ ಮನೆ ಕದ ತಟ್ಟಿದರು.

ಬೆಂಗಳೂರು: ನಿನ್ನೆ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಡೆಸಿದ ಸಂಧಾನ ಫಲ ನೀಡಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟ್ ಡಾ ಕೆ ಸುಧಾಕರ್ (Dr K Sudhakar) ಮತ್ತು ಆ ಕ್ಷೇತ್ರವನ್ನು ತನ್ನ ಮಗನಿಗೆ ಗಿಟ್ಟಿಸಿಕೊಳ್ಳಬೇಕೆಂದುಕೊಂಡಿದ್ದ ಯಲಹಂಕದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ (SR Vishwanath) ನಡುವೆ ಮುಸುಕಿನ ಗುದ್ದಾಟವಲ್ಲ ಬಹಿರಂಗವಾಗೇ ವಾಕ್ಸಮರ ನಡೆದಿತ್ತು. ಪರಸ್ಪರ ವಾಗ್ದಾಳಿಗಳನ್ನು ನಡೆಸಿದ್ದರು ಮತ್ತು ಪ್ರಚಾರಕ್ಕೆ ಹೋಗಲ್ಲ ಅಂತ ವಿಶ್ವನಾಥ್ ಪಟ್ಟು ಹಿಡಿದಿದ್ದರು. ಆದರೆ ಬಿಜೆಪಿಯ ಚಾಣಕ್ಕ ಅಮಿತ್ ಶಾ ನಿನ್ನೆ ಅವರಿಬ್ಬರೊಂದಿಗೆ ಮಾತಾಡಿದ ಪರಿಣಾಮವಾಗಿ ಮುನಿಸು ಅಂತ್ಯಕಂಡಿದೆ. ಇಂದು ಬೆಳ್ಳಂಬೆಳಗ್ಗೆಯೇ ಡಾ ಸುಧಾಕರ್ ಬೋಕೆಯೊಂದಿಗೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ್ ಮನೆ ಕದ ತಟ್ಟಿದರು. ಉಭಯ ನಾಯಕರ ನಡುವೆ ಮಾತುಕತೆಯ ಉಪಹಾರ ಸೇವೆನೆಯೂ ನಡೆಯಿತು. ಕೆಲ ಸ್ಥಳೀಯ ನಾಯಕರು ಸಹ ಅವರೊಂದಿಗಿದ್ದರು. ವಿಶ್ವನಾಥ್ ಜೊತೆ ಮಾತಾಡಿದ ಬಳಿಕ ಸುಧಾಕರ್ ಈಗ ನಿರಾಳರಾಗಿರಬೇಕು, ಯಾಕೆಂದರೆ ಬಿಜೆಪಿ ಶಾಸಕ ಯಲಹಂಕ ಭಾಗದಲ್ಲಿ ಅತ್ಯಂತ ಪ್ರಭಾವಿ ಜನನಾಯಕ ಎನಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಾ ಕೆ ಸುಧಾಕರ್ ವಿರುದ್ಧ ಹೆಚ್ಚಿದ ವಿರೋಧ, ನೆಲಮಂಗಲ ಮತ್ತು ಯಲಹಂಕದಲ್ಲಿ ಗೋ ಬ್ಯಾಕ್ ಸುಧಾಕರ್ ಅಭಿಯಾನ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.