AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಚುನಾವಣಾ ಪ್ರಚಾರದಲ್ಲಿ ಕೂಲ್ ಡ್ರಿಂಕ್ಸ್ ಮಾರಾಟಕ್ಕೆ ಬಂದ ವ್ಯಾಪಾರಿಗೆ ಭಾರೀ ನಷ್ಟ; ಕಾರಣ ಏನು ಗೊತ್ತಾ?

ಗದಗದ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಅವರ ಪ್ರಚಾರ ಕಾರ್ಯಕ್ರಮಕ್ಕೆ ಬಂದ ಜನರು ಬಾಯಾರಿದ ಹಿನ್ನೆಲೆ ಗೊಂದಲಕ್ಕೊಳಗಾಗಿ ವ್ಯಾಪಾರಿಯೊಬ್ಬರು ಮಾರಾಟಕ್ಕೆಂದು ತಂದಿದ್ದ ತಂಪು ಪಾನೀಯದ ವ್ಯಾನ್ ಮೇಲೆ ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.

Rakesh Nayak Manchi
|

Updated on:Apr 28, 2023 | 4:11 PM

Share

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಪ್ರಚಾರ ಕಾರ್ಯಕ್ರಮ ಹಿನ್ನೆಲೆ ಸುಡು ಬಿಸಿಲೆನ್ನದೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಆದರೆ ಬಿಸಿಲಿನ ಬೇಗೆಗೆ ಬೆಂದ ಜನರು ಬಾಯಾರಿಕೆಯಿಂದ ಬಳಲುತ್ತಿದ್ದರು. ಈ ವೇಳೆ ಒಂದು ತಂಪು ಪಾನೀಯ (Cool Drinks) ಮಾರಾಟದ ವ್ಯಾನ್ ಆಗಮಿಸಿದೆ. ಕಾರ್ಯಕ್ರಮಕ್ಕೆ ವ್ಯಾನ್ ಆಗಮಿಸುತ್ತಿದ್ದಂತೆ ವ್ಯಾನ್ ಮೇಲೆ ಮುಗಿಬಿದ್ದ ಜನರು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ನೀರಿನ ಬಾಟಲು ಕಿತ್ತಕೊಂಡು ಹೋಗಿದ್ದಕ್ಕೆ ಕಂಗಾಲಾದ ವ್ಯಾಪಾರಿ ಶರೀಫ್ ಕಣ್ಣೀರು ಹಾಕಿದ್ದಾರೆ. ಇಷ್ಟಕ್ಕೂ ಇಲ್ಲಿ ನಡೆದಿದ್ದೇನೆಂದರೆ, ಕಾರ್ಯಕ್ರಮ ಆಯೋಜಕರೇ ನೀರಿನ ವ್ಯವಸ್ಥೆ ಮಾಡಿದ್ದಾರೆಂದು ಭಾವಿಸಿ ಜನರು ವ್ಯಾನ್ ಮೇಲೆ ಮುಗಿಬಿದ್ದು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ಜನರನ್ನ ಗಾಡಿಯಿಂದ ಕೆಳಗಿಸಿದರು.

ಇದನ್ನೂ ಓದಿ: ಮೋದಿಗೆ ಧಮ್ಕಿ ಹಾಕಿದಷ್ಟು ಅವರ ಪರ ಅಲೆ ಏಳಲಿದೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಅಮಿತ್ ಶಾ

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Fri, 28 April 23

‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್