AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಚುನಾವಣಾ ಪ್ರಚಾರದಲ್ಲಿ ಕೂಲ್ ಡ್ರಿಂಕ್ಸ್ ಮಾರಾಟಕ್ಕೆ ಬಂದ ವ್ಯಾಪಾರಿಗೆ ಭಾರೀ ನಷ್ಟ; ಕಾರಣ ಏನು ಗೊತ್ತಾ?

ಗದಗದ ಲಕ್ಷ್ಮೇಶ್ವರದಲ್ಲಿ ಅಮಿತ್ ಶಾ ಅವರ ಪ್ರಚಾರ ಕಾರ್ಯಕ್ರಮಕ್ಕೆ ಬಂದ ಜನರು ಬಾಯಾರಿದ ಹಿನ್ನೆಲೆ ಗೊಂದಲಕ್ಕೊಳಗಾಗಿ ವ್ಯಾಪಾರಿಯೊಬ್ಬರು ಮಾರಾಟಕ್ಕೆಂದು ತಂದಿದ್ದ ತಂಪು ಪಾನೀಯದ ವ್ಯಾನ್ ಮೇಲೆ ಮುಗಿಬಿದ್ದು ಕೊಂಡೊಯ್ದ ಘಟನೆ ನಡೆದಿದೆ.

Rakesh Nayak Manchi
|

Updated on:Apr 28, 2023 | 4:11 PM

Share

ಗದಗ: ಲಕ್ಷ್ಮೇಶ್ವರದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಪ್ರಚಾರ ಕಾರ್ಯಕ್ರಮ ಹಿನ್ನೆಲೆ ಸುಡು ಬಿಸಿಲೆನ್ನದೆ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಆದರೆ ಬಿಸಿಲಿನ ಬೇಗೆಗೆ ಬೆಂದ ಜನರು ಬಾಯಾರಿಕೆಯಿಂದ ಬಳಲುತ್ತಿದ್ದರು. ಈ ವೇಳೆ ಒಂದು ತಂಪು ಪಾನೀಯ (Cool Drinks) ಮಾರಾಟದ ವ್ಯಾನ್ ಆಗಮಿಸಿದೆ. ಕಾರ್ಯಕ್ರಮಕ್ಕೆ ವ್ಯಾನ್ ಆಗಮಿಸುತ್ತಿದ್ದಂತೆ ವ್ಯಾನ್ ಮೇಲೆ ಮುಗಿಬಿದ್ದ ಜನರು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ನೀರಿನ ಬಾಟಲು ಕಿತ್ತಕೊಂಡು ಹೋಗಿದ್ದಕ್ಕೆ ಕಂಗಾಲಾದ ವ್ಯಾಪಾರಿ ಶರೀಫ್ ಕಣ್ಣೀರು ಹಾಕಿದ್ದಾರೆ. ಇಷ್ಟಕ್ಕೂ ಇಲ್ಲಿ ನಡೆದಿದ್ದೇನೆಂದರೆ, ಕಾರ್ಯಕ್ರಮ ಆಯೋಜಕರೇ ನೀರಿನ ವ್ಯವಸ್ಥೆ ಮಾಡಿದ್ದಾರೆಂದು ಭಾವಿಸಿ ಜನರು ವ್ಯಾನ್ ಮೇಲೆ ಮುಗಿಬಿದ್ದು ನೀರು, ಜ್ಯೂಸ್ ಕೊಂಡೊಯ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು, ಜನರನ್ನ ಗಾಡಿಯಿಂದ ಕೆಳಗಿಸಿದರು.

ಇದನ್ನೂ ಓದಿ: ಮೋದಿಗೆ ಧಮ್ಕಿ ಹಾಕಿದಷ್ಟು ಅವರ ಪರ ಅಲೆ ಏಳಲಿದೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಅಮಿತ್ ಶಾ

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Fri, 28 April 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​