Amit Shah: ಹಾಸನದಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ; ಕಾರ್ಯಕರ್ತರ ಮೇಲೆ ಹೂವಿನ ಮಳೆಗರೆದ ಶಾ

|

Updated on: Apr 24, 2023 | 7:20 PM

ಹಾನಸ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ಜಾಮಾಯಿಸಿದ್ದು, ಜನಸಂಖ್ಯೆ ನೋಡಿ ಖಷ್ ಆದ ಚುನಾವಣಾ ಚಾಣಕ್ಯ, ಕಾರ್ಯಕರ್ತರ ಮೇಲೆ ಹೂಮಳೆಗರೆದರು.

ಹಾಸನ: ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ (Amit Shah) ಅವರು ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಜಮಾಯಿಸಿದ್ದರು. ಅಪಾರ ಜನಸ್ತೋಮ ನೋಡಿ ಸಂತೋಷಗೊಂಡ ಬಿಜೆಪಿ ಚಾಣಕ್ಯ, ಕಾರ್ಯಕರ್ತರ ಮೇಲೆ ಹೂಮಳೆಗರೆದರು. ತೆರೆದ ವಾಹನದಲ್ಲಿ ಕಾರ್ಯಕರ್ತರತ್ತ ಕೈಬೀಸುತ್ತಾ, ನಮಸ್ಕರಿಸುತ್ತಾ ಕಾರ್ಯಕರ್ತರ ಮೇಲೆ ಹೂ ಸುರಿಯುತ್ತಾ ಮುನ್ನಡೆದರು. ಇದೇ ವೇಳೆ ಮಾತನಾಡಿದ ಅಮಿತ್ ಶಾ, ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೀತಮ್ ಗೌಡ ಅವರು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಜೆಡಿಎಸ್ (JDS)​ ಪಕ್ಷಕ್ಕೆ ಮತ ನೀಡಿದರೆ ಅವರು ನಂತರ ಕಾಂಗ್ರೆಸ್ ಜೊತೆ ಸೇರುತ್ತಾರೆ. ಹೀಗಾಗಿ ಜೆಡಿಎಸ್​ಗೆ ಮತ ಹಾಕಿದರೆ ಅದು ಕಾಂಗ್ರೆಸ್​ಗೆ ಮತ ನೀಡಿದಂತೆ. ನೀವೆಲ್ಲರೂ ಬಿಜೆಪಿ (BJP) ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Mon, 24 April 23

Follow us on