Amit Shah in Karnataka: ಅಮಿತ್ ಶಾರ ಕುಂದಗೋಳ್ ರೋಡ್ ಶೋ ಅಂತರವನ್ನು ಅರ್ಧ ಕಿಮೀ ಕಡಿಮೆ ಮಾಡಿದರೂ ಸಾಗರೋಪಾದಿಯಲ್ಲಿ ಜನ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 28, 2023 | 4:45 PM

ಕೇಂದ್ರ ಗೃಹ ಸಚಿವರ ಇಚ್ಛೆಯ ಮೇರೆಗೆ ಕುಂದಗೋಳದ ರೋಡ್ ಶೋ ಅಂತರವನ್ನು ಒಂದೂವರೆ ಕಿಮೀನಿಂದ ಒಂದು ಕಿಮೀಗೆ ಇಳಿಸಲಾಗಿದೆ. ಇದರಿಂದಾಗಿ ರಸ್ತೆಯುದ್ದಕ್ಕೂ ನೆರೆದಿದ್ದ ಸಹಸ್ರಾರು ಜನರಿಗೆ ನಿರಾಶೆಯುಂಟಾಗಿರಬಹುದು.

ಧಾರವಾಡ: ಜಿಲ್ಲೆಯ ಕುಂದಗೋಳ್ ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ರೋಡ್ ಶೋ ಭರ್ಜರಿಯಾಗಿ ನಡೆಯುತ್ತಿದೆ. ಈ ವಿಡಿಯೋದಲ್ಲಿ ಅಮಿತ್ ಶಾ ಅವರು ಹುಬ್ಬಳ್ಳಿಯಿಂದ ಕುಂದಗೋಳ್ (Kundgol) ಆಗಮಿಸುತ್ತಿರುವುದನ್ನು ನೋಡಬಹುದು. ಅಸಲಿಗೆ ಎರಡು ಹೆಲಿಕಾಪ್ಟರ್ ಗಳು ಆಗಮಿಸಿವೆ, ಒಂದರಲ್ಲಿ ಶಾ ಮತ್ತು ಮತ್ತೊಬ್ಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಬಂದರೆ ಇನ್ನೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಇತರ ಗಣ್ಯರು ಆಗಮಿಸಿದರು. ಕೇಂದ್ರ ಗೃಹ ಸಚಿವರ ಇಚ್ಛೆಯ ಮೇರೆಗೆ ಕುಂದಗೋಳದ ರೋಡ್ ಶೋ ಅಂತರವನ್ನು ಒಂದೂವರೆ ಕಿಮೀನಿಂದ ಒಂದು ಕಿಮೀಗೆ ಇಳಿಸಲಾಗಿದೆ. ಇದರಿಂದಾಗಿ ರಸ್ತೆಯುದ್ದಕ್ಕೂ ನೆರೆದಿದ್ದ ಸಹಸ್ರಾರು ಜನರಿಗೆ ನಿರಾಶೆಯುಂಟಾಗಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 28, 2023 04:44 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.