AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಕಿಂಗ್ ಕೊಹ್ಲಿಯನ್ನು ಹೊಗಳಿದ ಅಮಿತಾಬ್; ವಿಡಿಯೋ ನೋಡಿ

Amitabh Bachchan Praises Virat Kohli: ಕೌನ್ ಬನೇಗಾ ಕರೋಡ್ಪತಿ ಸೀಸನ್ 17 ರಲ್ಲಿ, ಒಂದು ಪ್ರಶ್ನೆಯ ಮೂಲಕ ವಿರಾಟ್ ಕೊಹ್ಲಿಯನ್ನು ಅಮಿತಾಭ್ ಬಚ್ಚನ್ ಹೊಗಳಿದ್ದಾರೆ. ಸ್ಪರ್ಧಿಯ ಉತ್ತರದ ನಂತರ, ಅಮಿತಾಬ್ ಅವರು ಕೊಹ್ಲಿಯ ಐಪಿಎಲ್ ಪ್ರಯಾಣ ಮತ್ತು ಭಾವುಕ ಗೆಲುವಿನ ಕ್ಷಣವನ್ನು ಸ್ಮರಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೊಹ್ಲಿಯ ಅಪಾರ ಜನಪ್ರಿಯತೆಯನ್ನು ತೋರಿಸುತ್ತದೆ.

ಪೃಥ್ವಿಶಂಕರ
|

Updated on: Sep 01, 2025 | 5:04 PM

Share

ಬಾಲಿವುಡ್ ಬಿಗ್​ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್​ಪತಿ ಸೀಸನ್ 17 ಕಳೆದ ತಿಂಗಳು ಅಂದರೆ ಆಗಸ್ಟ್ 11 ರಿಂದ ಆರಂಭವಾಗಿದೆ. ಈ ಕಾರ್ಯಕ್ರಮದ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಅಮಿತಾಬ್, ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಆರ್​ಸಿಬಿ ತಂಡದ ಜೀವಾಳ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ್ದಾರೆ.

ವಾಸ್ತವವಾಗಿ ಕೌನ್ ಬನೇಗಾ ಕರೋಡ್​ಪತಿ ಸೀಸನ್ 17 ರ ಒಂದು ಸಂಚಿಕೆಯಲ್ಲಿ, ಅಮಿತಾಬ್ ಬಚ್ಚನ್ ಹಾಟ್ ಸೀಟ್​ನಲ್ಲಿ ಕುಳಿತಿದ್ದ ಸ್ಪರ್ಧಿಗೆ ಒಂದು ಪ್ರಶ್ನೆ ಕೇಳಿದರು. ಆ ಪ್ರಶ್ನೆ ವಿರಾಟ್ ಕೊಹ್ಲಿಗೆ ಸಂಬಂಧಿಸಿದ್ದು, ಇದಕ್ಕೆ ನಾಲ್ಕು ಆಯ್ಕೆಗಳನ್ನು ನೀಡಲಾಗಿತ್ತು. ಆ ಪ್ರಶ್ನೆ ಏನೆಂದರೆ..

ತಮ್ಮ ವೃತ್ತಿಜೀವನದಲ್ಲಿ ಒಂದೇ ಐಪಿಎಲ್ ಫ್ರಾಂಚೈಸಿ ಪರ 9000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಯಾರು ಎಂಬುದು ಪ್ರಶ್ನೆಯಾಗಿತ್ತು. ಅಮಿತಾಬ್ ಬಚ್ಚನ್ ಅವರ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಸ್ಪರ್ಧಿ, ವಿರಾಟ್ ಕೊಹ್ಲಿ ಎಂದರು. ಈ ಉತ್ತರ ಕೂಡ ಸರಿಯಾಗಿತ್ತು. ಉತ್ತರದ ಬಳಿಕ ಮಾತನಾಡಿದ ಅಮಿತಾಬ್ ಕಿಂಗ್ ಕೊಹ್ಲಿಯನ್ನು ಹಾಡಿ ಹೊಗಳಿದರು.

ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಆರ್‌ಸಿಬಿ ಪರ ಮಾತ್ರ ಆಡಿದ್ದಾರೆ. ಆದರೆ ಅವರ ನಾಯಕತ್ವದಲ್ಲಾಗಲಿ ಅಥವಾ ಬೇರೆಯವರ ನಾಯಕತ್ವದಲ್ಲಾಗಲಿ ತಂಡ ಎಂದಿಗೂ ಕಪ್ ಗೆದ್ದಿರಲಿಲ್ಲ. ಆದರೆ 2025 ರಲ್ಲಿ ಕಪ್ ಗೆಲ್ಲುವ ಕನಸು ನನಸಾಯಿತು. ಆ ಐತಿಹಾಸಿಕ ಗೆಲುವಿನ ಕ್ಷಣದ ವಿಡಿಯೋವನ್ನು ನೀವು ನೋಡಿರಬೇಕು. ಅದರಲ್ಲಿ ವಿರಾಟ್ ಕೊಹ್ಲಿ ತುಂಬಾ ಭಾವುಕರಾಗಿದ್ದರು. ಪ್ರಪಂಚದಾದ್ಯಂತ ಪ್ರಸಿದ್ಧನಾಗಿರುವ ಅಂತಹ ಸ್ಟಾರ್ ಕ್ರಿಕೆಟಿಗ ಕೂಡ, ಹಲವು ವರ್ಷಗಳ ನಂತರ ಅಂತಹ ಗೆಲುವು ಬಂದಾಗ ಭಾವುಕನಾಗುತ್ತಾನೆ ಎಂದರು. ಇದೀಗ ಅಮಿತಾಬ್ ಅವರ ಈ ಹೊಗಳಿಕೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?