ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಎಲ್ಲ ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್

Updated on: Oct 18, 2024 | 6:25 PM

ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಎರಡು ದಿನದಿಂದ ಅವರು ಕೋಮಾದಲ್ಲಿ ಇದ್ದರು. ಅವರಿಗೆ ನಿಜಕ್ಕೂ ಯಾವ ರೀತಿಯ ಸಮಸ್ಯೆ ಆಗಿತ್ತು ಎಂಬುದನ್ನು ಅಮೂಲ್ಯ ಪತಿ ಜಗದೀಶ್ ವಿವರಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ದೀಪಕ್ ಅರಸ್​ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

‘ಸಿನಿಮಾ ಬಗ್ಗೆ ಜಗದೀಶ್ ಅವರಿಗೆ ಕನಸು ಇತ್ತು. ಅದಕ್ಕಾಗಿ ಆರೋಗ್ಯವನ್ನೂ ಲೆಕ್ಕಸದೇ ಅವರು ಕೆಲಸ ಮಾಡಿದ್ದರು. ಆಗಲೇ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ಇತ್ತೀಚೆಗೆ ಎರಡೂ ಕಿಡ್ನಿ ವೈಫಲ್ಯ ಆಗಿತ್ತು. ಡಯಾಲಿಸಿಸ್​ ಮಾಡಿಸುತ್ತಿದ್ದರು. ಡಯಾಲಿಸಿಸ್​ ವೇಳೆ ಬ್ರೇನ್​ನಲ್ಲಿ ರಕ್ತಸ್ರಾವ ಆಯಿತು. ಎರಡು ದಿನಗಳಿಂದ ಕೋಮಾದಲ್ಲಿ ಇದ್ದರು. ಇಂದು (ಅ.18) ಬೆಳಗ್ಗೆ ಅವರು ನಮ್ಮನ್ನು ಅಗಲಿದ್ದಾರೆ. ಅವರಿಗೆ ಆರೋಗ್ಯದ ಅದೃಷ್ಟ ಕೈ ಹಿಡಿಯಲಿಲ್ಲ. ಅಮೂಲ್ಯ ಅವರು ಚಿತ್ರರಂಗದಲ್ಲಿ ಯಶಸ್ಸು ಕಾಣಲು ದೀಪಕ್​ ಮತ್ತು ತಾಯಿ ಶ್ರಮಪಟ್ಟಿದ್ದರು’ ಎಂದು ಅಮೂಲ್ಯ ಪತಿ ಜಗದೀಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More