ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಯತ್ತಿದ್ದ ಕೆಡಿಪಿ ಸಭೆಯಿಂದ ಕೋಪ ಕಾರುತ್ತಾ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2025 | 1:51 PM

ಮೂರು ತಿಂಗಳಿಗೊಮ್ಮೆ ನಡೆಸಬೇಕಿರುವ ಸಭೆಯನ್ನು ಆರು ತಿಂಗಳ ನಂತರ ನಡೆಸುತ್ತಿರುವಿರೆಂದು ಸುರೇಶ್ ಗೌಡ ಅತೃಪ್ತಿ ವ್ಯಕ್ತಪಡಿಸಿದ್ದು ಸಹ ವರದಿಯಾಗಿದೆ. ಅಸಲು ವಿಷಯವೇನೆಂದರೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗುತ್ತಿಲ್ಲ, ಸುರೇಶ್ ಗೌಡ ಪತ್ರಿಕಾ ಗೋಷ್ಠಿಗಳಲೆಲ್ಲ ಅನುದಾನ ಸಿಗದಿರುವ ವಿಷಯವನ್ನು ಹೇಳುತ್ತಿದ್ದರರೂ ಸರ್ಕಾರ ಕ್ಯಾರೆ ಅಂದಿಲ್ಲ.

ತುಮಕೂರು: ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಇಂದು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಿಂದ ಹೊರನಡೆದು ತಮ್ಮ ಅಸಮಾಧಾನ ಹೊರಹಾಕಿದರು. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಅವರು ಹೇಮಾವತಿ ನದಿ ನೀರಿನ ವಿಷಯ ಪ್ರಸ್ತಾಪಿಸಿದ್ದರು. ಆದರೆ ಚರ್ಚೆ ಗ್ಯಾರಂಟಿ ಯೋಜನೆಗಳ ಮೇಲೆ ಹೆಚ್ಚು ಕೇಂದ್ರೀಕೃತಗೊಂಡಿದ್ದರಿಂದ ಅವರು ಕೋಪಗೊಂಡು ಸಭೆಯಿಂದ ಹೊರನಡೆದರು. ಕೂತ್ಕೊಳ್ಳಿ ಅಂತ ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜಿ ಪರಮೇಶ್ವರ್ ಹೇಳುತ್ತಿದ್ದರೂ ಸುರೇಶ್ ಗೌಡ ದುರುದುರುಮ ಅಂತ ಹೊರನಡೆದು ಹೋದರು. ಅವರ ಮತ್ತು ಸಹಕಾರ ಸಚಿವ ಕೆಎನ್ ರಾಜಣ್ಣ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ಕೂಡ ನಡೆಯುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರಾಜ್ಯಾಧ್ಯಕ್ಷನಾಗುವ ಆಸೆ ನನಗಿಲ್ಲ, ಬಸನಗೌಡ ಯತ್ನಾಳ್​ಗೆ ಪಟ್ಟ ಕಟ್ಟಿದರೆ ತಕರಾರಿಲ್ಲ: ಸುರೇಶ್ ಗೌಡ, ಬಿಜೆಪಿ ಶಾಸಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.