ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯಿಂದ ಬಂದ ದರ್ಶನ್​ನ  ವೃದ್ಧೆ ಅಭಿಮಾನಿ

ದರ್ಶನ್ ಒಂದು ಹೆಣ್ಣಿನಿಂದ ತನ್ನ ಬದುಕು ಹಾಳು ಮಾಡಿಕೊಂಡಿದ್ದಾರೆ ಎಂದು ಹುಬ್ಬಳ್ಳಿಯಿಂದ ಬಂದಿರುವ ಮಹಿಳೆ ಹೇಳುತ್ತಾರೆ. ಅಫ್ ಕೋರ್ಸ್ ಅವರು ಪವಿತ್ರಾ ಗೌಡರನ್ನು ಉಲ್ಲೇಖಿಸಿ ಹೇಳುತ್ತಾರೆ. ಆದರೆ ಕೇವಲ ಪವಿತ್ರಾ ಗೌಡರನ್ನು ದೂರುವುವದರಿಂದ ಪ್ರಯೋಜನವಿಲ್ಲ, ಯಾಕೆಂದರೆ ಹೆಚ್ಚು ಕಡಿಮೆ 50-ವರ್ಷ ವಯಸ್ಸಿನ ದರ್ಶನ್ ಗೆ ಯಾವುದು ಸರಿ, ಯಾವುದು ತಪ್ಪೆಂಬ ವಿವೇಚನೆ ಇರಬೇಕಿತ್ತು.

ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯಿಂದ ಬಂದ ದರ್ಶನ್​ನ  ವೃದ್ಧೆ ಅಭಿಮಾನಿ
|

Updated on: Jul 01, 2024 | 1:59 PM

ಆನೇಕಲ್ (ಬೆಂಗಳೂರು): ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಎಲ್ಲ ವಯೋಮಾನದ ಅಭಿಮಾನಿಗಳು ಇದ್ದಾರೆ. ದೃಶ್ಯಗಳಲ್ಲಿ ನಮ್ಮ ವರದಿಗಾರ್ತಿಯೊಂದಿಗೆ ಮಾತಾಡುತ್ತಿರುವ ಹಿರಿಯ ಮಹಿಳೆ ದರ್ಶನ್ ರನ್ನು ಕಂಡು ಮಾತಾಡಲು ಹುಬ್ಬಳ್ಳಿಯಿಂದ ಬಂದಿದ್ದಾರೆ. ತಾನು ದರ್ಶನ್ ಅಭಿನಯದ ಎಲ್ಲ ಸಿನಿಮಾಗಳನ್ನು ನೋಡಿದ್ದೇನೆ ಎಂದು ಹೇಳುವ ಮಹಿಳೆ ಉತ್ಕಟಾಭಿಮಾನದಲ್ಲಿ ಮತ್ತೇನೇನೋ ಹೇಳುತ್ತಾರೆ. ಆದರೆ ನಟನ ಬಗ್ಗೆ ಅವರಿಗೆ ಅತೀವ ಪ್ರೀತಿ,ವಾತ್ಸಲ್ಯ ಮತ್ತು ಮಮತೆ ಇರೋದು ಮಾತುಗಳಲ್ಲಿ ವ್ಯಕ್ತವಾಗುತ್ತದೆ. ತನ್ನನ್ನು ಜೈಲು ಅಧಿಕಾರಿಗಳು ಒಳಗಡೆ ಹೋಗಲು ಬಿಡುತ್ತಿಲ್ಲ, ನಮ್ಮ ವರದಿಗಾರ್ತಿಯೇ ಅವಕಾಶ ಮಾಡಿಸಿಕೊಡಬೇಕೆಂದು ಅವರು ಹೇಳುತ್ತಾರೆ. ಸರಿ ಒಳಗೆ ಬಿಟ್ಟರೆ ದರ್ಶನ್ ಜೊತೆ ಏನು ಮಾತಾಡ್ತೀರಾ? ಅಂತ ಕೇಳಿದರೆ, ಎಲ್ಲಾನೂ ಮಾತಾಡ್ತೀನಿ, ನಿಂಗೆ ಎಲ್ಲ್ಲವೂ ಇತ್ತು, ನನ್ನಂಥ ಕೋಟ್ಯಾಂತರ ಅಭಿಮಾನಿಗಳಿದ್ದಾರೆ, ನಿನ್ನ ಕೈಯಾರೆ ಜೀವನ ಹಾಳುಮಾಡಿಕೊಂಡೆಯಲ್ಲ? ಯಾಕೆ ಹೀಗೆ ಮಾಡಿದೆ ಮಗಾ ಅಂತ ಕೇಳ್ತೀನಿ ಎಂದು ಒಬ್ಬ ತಾಯಲ್ಲಿರುವ ಕಕ್ಕಲತೆಯನ್ನು ಮಹಿಳೆ ತೋರುತ್ತಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಟ ದರ್ಶನ್ ರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದಾಗ ಗೆಲುವಿನ ನಗೆ ಬೀರಿದ್ದು ಅವರನ್ನು ಬಂಧಿಸಿದ್ದ ಎಸಿಪಿ ಚಂದನ್!

Follow us
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ