ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ ಟವರ್ ಏರಿ ಆತ್ಮಹತ್ಯೆಗೆ ಯತ್ನ; ವಿಡಿಯೋ ವೈರಲ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 19, 2023 | 4:07 PM

ಅಮ್ಜದ್​​ ಖಾನ್ ಹಾಗೂ ಇತನ ಕಿರಿಯ ಸಹೋದರ ಶೋಯಲ್​ ನಡುವೆ ಗಲಾಟೆ‌ ಆಗುತ್ತಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುಮಾರು 1 ಗಂಟೆಗಳ ಕಾಲ ಮೊಬೈಲ್​​ ಟವರ್ ಏರಿ ಹೈಡ್ರಾಮಾ ಮಾಡಿದ್ದ ಅಮ್ಜದ್​ನನ್ನು ಮಾನ್ವಿ ಪೊಲೀಸರು ಮನವೊಲಿಸಿ ಟವರ್​​ನಿಂದ ಇಳಿಸಿದ್ದಾರೆ.

ರಾಯಚೂರು, ಅ.19: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯೋರ್ವ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು (Raichur) ಜಿಲ್ಲೆ ಮಾನ್ವಿ ಪಟ್ಟಣದಲ್ಲಿ‌ ನಡೆದಿದೆ. ಅಮ್ಜದ್​​ ಖಾನ್​​ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹೌದು, ಅಮ್ಜದ್​​ ಖಾನ್ ಹಾಗೂ ಇತನ ಕಿರಿಯ ಸಹೋದರ ಶೋಯಲ್​ ನಡುವೆ ಗಲಾಟೆ‌ ಆಗುತ್ತಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುಮಾರು 1 ಗಂಟೆಗಳ ಕಾಲ ಮೊಬೈಲ್​​ ಟವರ್ ಏರಿ ಹೈಡ್ರಾಮಾ ಮಾಡಿದ್ದ ಅಮ್ಜದ್​ನನ್ನು ಮಾನ್ವಿ ಪೊಲೀಸರು ಮನವೊಲಿಸಿ ಟವರ್​​ನಿಂದ ಇಳಿಸಿದ್ದಾರೆ. ಈ ಘಟನೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More