ಗಡಿನಾಡು ಜಿಲ್ಲೆಯಲ್ಲಿ ಅಮಾನವೀಯ ಘಟನೆ, ಚಿನ್ನದಂತಹ ಟೊಮ್ಯಾಟೋ ಗಿಡಗಳನ್ನು ಬೇರು ಸಮೇತ ಕಿತ್ತು ಹಾಕಿದ ಕಿರಾತಕರು
chamarajanagar: ರಾತ್ರೋ ರಾತ್ರಿ ಜಮೀನಿಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನ ಬೇರು ಸಮೇತ ಕಿತ್ತಾಕಿದ್ದಾರೆ.
ಆತ ಬಡ ರೈತ.. ಕೈ ತುಂಬಾ ಸಾಲ ಸೂಲ ಮಾಡ್ಕೊಂಡು ಟೊಮ್ಯಾಟೋ ಬೆಳೆ ಹಾಕಿದ್ದ.. ಇನ್ನೇನು ಬೆಳೆ ಕೈ ಹಿಡಿಯಿತು ಮಾಡಿದ್ದ ಸಾಲವನ್ನ ತೀರಿಸೋಣ ಎಂದು ಕನಸು ಕಾಣುತ್ತಿದ್ದ ಅನ್ನದಾತ ಈಗ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಒಂದುವರೆ ಎಕರೆಯಲ್ಲಿ ಬೆಳೆದ ಟೊಮ್ಯಾಟೋ ಬೆಳೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಣ್ಣು ಪಾಲಾಗಿದೆ.ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕಣ್ಣಾಡಿಸಿದ ಕಡೆಯಲ್ಲಾ ಟೊಮ್ಯಾಟೋ ಗಿಡಗಳದ್ದೆ ಕಲರವ.. ಎತ್ತ ನೋಡಿದ್ರು ಬೆಳೆದು ನಿಂತಿರುವ ಟೊಮ್ಯಾಟೋ.. ಇನ್ನೇನು ಒಂದು ವಾರ ಕಳೆದಿದ್ರೆ ಬೆಳೆದ ಟೊಮ್ಯಾಟೋವನ್ನ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸ ಬಹುದಿತ್ತು. ಅಷ್ಟರಲ್ಲಾಗಲೇ ಕಿರಾತಕರ ಕಣ್ಣು ಬೆಳೆದು ನಿಂತ ಟೊಮ್ಯಾಟೋ ಗಿಡದ ಮೇಲೆ ಬಿದ್ದಿದೆ ( tomato plants).ಬರೋಬ್ಭರಿ ಒಂದುವರೆ ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಟಮ್ಯಾಟೋ ಗಿಡವನ್ನ ಬೇರು ಸಮೇತ ಕಿತ್ತಾಕಲಾಗಿದೆ. ಇದರಿಂದ ಕಂಗಾಲಾದ ರೈತ ಈಗ ಕಣ್ಣೀರು ಹಾಕುತ್ತಾ ಗೊಳಾಡುವಂತ ಪರಿಸ್ಥಿತಿ ಎದುರಾಗಿದೆ ( inhuman incident).
ಅಂದಹಾಗೆ ಈ ಘಟನೆ ನಡೆದಿದ್ದು ಚಾಮರಾಜನಗರ ಜಿಲ್ಲೆ (chamarajanagar) ಚಾಮರಾಜನಗರ ತಾಲೂಕಿನ ಕಬ್ಬೇಪುರ ಗ್ರಾಮದಲ್ಲಿ. ಹೌದು ರೈತ ಮಂಜುನಾಥ್ ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ರು. ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡಮಾನವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ ಸಾಲವನ್ನ ತೀರಿಸಬಹುದೆಂಬ ಆಸೆಯಲ್ಲಿ ಇದ್ರು. ಆದ್ರೆ ರಾತ್ರೋ ರಾತ್ರಿ ಜಮೀನಿಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನ ಬೇರು ಸಮೇತ ಕಿತ್ತಾಕಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
