ಗಡಿನಾಡು ಜಿಲ್ಲೆಯಲ್ಲಿ ಅಮಾನವೀಯ ಘಟನೆ, ಚಿನ್ನದಂತಹ ಟೊಮ್ಯಾಟೋ ಗಿಡಗಳನ್ನು ಬೇರು ಸಮೇತ ಕಿತ್ತು ಹಾಕಿದ ಕಿರಾತಕರು

Edited By:

Updated on: Aug 04, 2023 | 11:35 AM

chamarajanagar: ರಾತ್ರೋ ರಾತ್ರಿ ಜಮೀನಿಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನ ಬೇರು ಸಮೇತ ಕಿತ್ತಾಕಿದ್ದಾರೆ.

ಆತ ಬಡ ರೈತ.. ಕೈ ತುಂಬಾ ಸಾಲ ಸೂಲ ಮಾಡ್ಕೊಂಡು ಟೊಮ್ಯಾಟೋ ಬೆಳೆ ಹಾಕಿದ್ದ.. ಇನ್ನೇನು ಬೆಳೆ ಕೈ ಹಿಡಿಯಿತು ಮಾಡಿದ್ದ ಸಾಲವನ್ನ ತೀರಿಸೋಣ ಎಂದು ಕನಸು ಕಾಣುತ್ತಿದ್ದ ಅನ್ನದಾತ ಈಗ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಒಂದುವರೆ ಎಕರೆಯಲ್ಲಿ ಬೆಳೆದ ಟೊಮ್ಯಾಟೋ ಬೆಳೆ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಮಣ್ಣು ಪಾಲಾಗಿದೆ.ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕಣ್ಣಾಡಿಸಿದ ಕಡೆಯಲ್ಲಾ ಟೊಮ್ಯಾಟೋ ಗಿಡಗಳದ್ದೆ ಕಲರವ.. ಎತ್ತ ನೋಡಿದ್ರು ಬೆಳೆದು ನಿಂತಿರುವ ಟೊಮ್ಯಾಟೋ.. ಇನ್ನೇನು ಒಂದು ವಾರ ಕಳೆದಿದ್ರೆ ಬೆಳೆದ ಟೊಮ್ಯಾಟೋವನ್ನ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸ ಬಹುದಿತ್ತು. ಅಷ್ಟರಲ್ಲಾಗಲೇ ಕಿರಾತಕರ ಕಣ್ಣು ಬೆಳೆದು ನಿಂತ ಟೊಮ್ಯಾಟೋ ಗಿಡದ ಮೇಲೆ ಬಿದ್ದಿದೆ ( tomato plants).ಬರೋಬ್ಭರಿ ಒಂದುವರೆ ಎಕರೆ ಜಮೀನಿನಲ್ಲಿ ಬೆಳೆದು ನಿಂತಿದ್ದ ಟಮ್ಯಾಟೋ ಗಿಡವನ್ನ ಬೇರು ಸಮೇತ ಕಿತ್ತಾಕಲಾಗಿದೆ. ಇದರಿಂದ ಕಂಗಾಲಾದ ರೈತ ಈಗ ಕಣ್ಣೀರು ಹಾಕುತ್ತಾ ಗೊಳಾಡುವಂತ ಪರಿಸ್ಥಿತಿ ಎದುರಾಗಿದೆ ( inhuman incident).

ಅಂದಹಾಗೆ ಈ ಘಟನೆ ನಡೆದಿದ್ದು ಚಾಮರಾಜನಗರ ಜಿಲ್ಲೆ (chamarajanagar) ಚಾಮರಾಜನಗರ ತಾಲೂಕಿನ ಕಬ್ಬೇಪುರ ಗ್ರಾಮದಲ್ಲಿ. ಹೌದು ರೈತ ಮಂಜುನಾಥ್ ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ರು. ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡಮಾನವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ ಸಾಲವನ್ನ ತೀರಿಸಬಹುದೆಂಬ ಆಸೆಯಲ್ಲಿ ಇದ್ರು. ಆದ್ರೆ ರಾತ್ರೋ ರಾತ್ರಿ ಜಮೀನಿಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಒಂದುವರೆ ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ ಬೆಳೆಯನ್ನ ಬೇರು ಸಮೇತ ಕಿತ್ತಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More