ಸಂಸದ ಸಿಎನ್ ಮಂಜುನಾಥ್​ರ ಮೊದಲ ಸಭೆಯಲ್ಲಿ ಚೆಸ್ ಆಡುತ್ತಾ ಕುಳಿತನೊಬ್ಬ ಅಧಿಕಾರಿ!

Updated on: Aug 27, 2024 | 7:35 PM

ದಿಶಾ ಮತ್ತು ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ತಡವಾಗಿ ಬರೋದು, ಸಮಯಕ್ಕೆ ಸರಿಯಾಗಿ ಬಂದರೂ ತಮ್ಮ ಮೊಬೈಲ್ ಫೋನ್ ಗಳಲ್ಲಿ ಗೇಮ್​ ಗಳನ್ನಾಡುವ, ಚಾಟಿಂಗ್ ಮಾಡುತ್ತ ಕಾಲಹರಣ ಮಾಡುವ ದೃಶ್ಯಗಳು ಪದೇಪದೆ ವರದಿಯಾಗುತ್ತಿವೆ. ಇದನ್ನು ಮಾಡುವ ಬದಲು ಅಧಿಕಾರಿಗಳು ಮನೇಲಿರೋದೇ ಲೇಸು!

ರಾಮನಗರ: ಬೆಂಗಳೂರು ಗ್ರಾಮಾಂತರ ಸಂಸದ ಡಾ ಸಿಎನ್ ಮಂಜುನಾಥ ಅವರು ಇಂದು ರಾಮನಗರದಲ್ಲಿ ನಡೆಸಿದ ದಿಶಾ ಸಭೆಯಲ್ಲಿ ಅಧಿಕಾರಿಯೊಬ್ಬ ಸಂಸದ ಹೇಳುವುದನ್ನು ಕೇಳಿಸಿಕೊಳ್ಳದೆ ತನ್ನ ಮೊಬೈಲ್ ಫೋನಲ್ಲಿ ಚೆಸ್ ಆಡುವುದರಲ್ಲಿ ಮಗ್ನರಾಗಿದ್ದರು! ಮಂಜುನಾಥ ಅವರು ಲೋಕಸಭೆಗೆ ಆಯ್ಕೆಯಾದ ಬಳಿಕ ನಡೆಸಿದ ಮೊದಲ ಸಭೆ ಇದು. ಸಭೆಯಲ್ಲಿ ಆಫೀಸರ್ ಗಳು ಯಾಪಾಟಿ ಗಂಭೀರರಾಗಿರುತ್ತಾರೆ ಅನ್ನೋದು ಮಂಜುನಾಥ್ ಅವರಿಗೆ ಗೊತ್ತಾಗಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿ ಮೇಲೆ ಶಾಲೆಯ ಮುಖ್ಯೋಪಾಧ್ಯಾಯನ ಹಾಗೆ ರೇಗಿದ ಪರಮೇಶ್ವರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More