AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಕೇಳಿದ್ರು’; ರಂಗಭೂಮಿ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್

‘ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಕೇಳಿದ್ರು’; ರಂಗಭೂಮಿ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್

ರಾಜೇಶ್ ದುಗ್ಗುಮನೆ
|

Updated on: Sep 04, 2023 | 11:00 AM

Share

ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು.

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಇಂದು (ಸೆಪ್ಟೆಂಬರ್ 4) ಅವರಿಗೆ ಜನ್ಮದಿನದ ಸಂಭ್ರಮ. ಭಾನುವಾರ (ಸೆಪ್ಟೆಂಬರ್ 3) ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ಅನಂತ ಅಭಿನಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಹಾಗೂ ಗಾಯತ್ರಿ ದಂಪತಿಯನ್ನು ಸಾರೋಟಿನಲ್ಲಿ ಮೆರವಣಿಗೆ ಮೂಲಕ ಸಭಾಂಗಣಕ್ಕೆ ತರಲಾಯಿತು. ಈ ವೇಳೆ ಮಾತನಾಡಿದ ಅವರು, ‘ನಾನು ಹಲವು ವರ್ಷ ನಾಟಕಗಳನ್ನು ಮಾಡುತ್ತಿದ್ದೆ. ನಾಟಕವೇನೋ ಸರಿ, ಹೊಟ್ಟೆ ಪಾಡಿಗೆ ಏನು ಮಾಡ್ತೀಯಾ ಎಂದು ಕೇಳುತ್ತಿದ್ದರು. ಅಷ್ಟು ಅನಿಶ್ಚಿತತೆ. ಆ ಬಳಿಕ ಸಿನಿಮಾ ರಂಗದಲ್ಲಿ ಅವಕಾಶ ಸಿಕ್ಕಿತು. 50 ವರ್ಷ ಸಿನಿಮಾ ರಂಗದಲ್ಲಿ ಕಳೆದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More