AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag: ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

Gadag: ಉತ್ಖನನದ ವೇಳೆ ಲಕ್ಕುಂಡಿಯಲ್ಲಿ ಪತ್ತೆಯಾಯ್ತು ಪುರಾತನ ಶಿವಲಿಂಗ!

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jan 18, 2026 | 1:09 PM

Share

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನದ ಪಕ್ಕದಲ್ಲಿ ಶಾಲೆಯ ಕಟ್ಟಡ ಕೆಡವುವಾಗ ಪುರಾತನ ಶಿವಲಿಂಗವೊಂದು ಪತ್ತೆಯಾಗಿದೆ. ಕೋಟೆ ಗೋಡೆಯಲ್ಲಿ ಕಂಡುಬಂದ ಈ ಲಿಂಗವನ್ನು ಗ್ರಾಮಸ್ಥರು ಮೊದಲು ಗುರುತಿಸಿದ್ದು, ಪುರಾತತ್ವ ಇಲಾಖೆ ಇದರ ಕಾಲಮಾನವನ್ನು ನಿರ್ಧರಿಸಲು ಪರಿಶೀಲನೆ ನಡೆಸುತ್ತಿದೆ. ಇದು ರಾಜ ಮಹಾರಾಜರ ಕಾಲದ್ದಾಗಿರಬಹುದು ಎಂದು ಸ್ಥಳೀಯರು ನಂಬಿದ್ದಾರೆ.

ಗದಗ, ಜನವರಿ 18: ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ಈ ಸಂದರ್ಭದಲ್ಲಿಯೇ ಲಕ್ಕುಂಡಿಯಲ್ಲಿನ ಕೋಟೆ ಗೋಡೆಯ ಪಕ್ಕದಲ್ಲಿದ್ದ ಶಾಲಾ ಕಟ್ಟಡವನ್ನು ಕೆಡವುವಾಗ ಅಲ್ಲಿ ಪುರಾತನ ಕಾಲದ ಶಿವಲಿಂಗವೊಂದು ಪತ್ತೆಯಾಗಿದೆ. ನಿಧಿ ಶೋಧದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಜಾಗಕ್ಕೆ ಸಮೀಪದಲ್ಲಿಯೇ ಈ ಲಿಂಗ ಕಂಡುಬಂದಿದೆ. ಸಂಪೂರ್ಣವಾಗಿ ಡೆಮಾಲಿಶ್ ಮಾಡಿದ ಶಾಲೆಯ ಗೋಡೆಯ ಭಾಗದಲ್ಲಿ ಗ್ರಾಮಸ್ಥರ ಕಣ್ಣಿಗೆ ಈ ಶಿವಲಿಂಗ ಮೊದಲು ಬಿದ್ದಿದೆ. ಈ ಲಿಂಗವು ಬಹಳ ಹಳೆಯ ಕಾಲದ್ದಾಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ. ಪುರಾತತ್ವ ಇಲಾಖೆಯು ಈ ಲಿಂಗದ ಕುರಿತು ಪರಿಶೀಲನೆ ನಡೆಸುತ್ತಿದ್ದು, ಇದು ಯಾವ ಕಾಲಮಾನಕ್ಕೆ ಸೇರಿದ್ದು ಎಂಬ ಬಗ್ಗೆ ಸ್ಪಷ್ಟಪಡಿಸಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 18, 2026 01:07 PM
Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More