ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ

Updated on: Oct 19, 2024 | 8:45 PM

ತೆಲಂಗಾಣದ ಹನುಮಕೊಂಡದಲ್ಲಿ ಶಿವನ ದೇವಸ್ಥಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ಖನನದ ವೇಳೆ ಬಾಲ ಹನುಮಾನ್ ವಿಗ್ರಹ ಪತ್ತೆಯಾಗಿದೆ. ಇದರೊಂದಿಗೆ ಸ್ಥಳೀಯರು ಸೇರಿ ಹನುಮಂತನ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿದರು.

ಹೈದರಾಬಾದ್: ತೆಲಂಗಾಣದ ಹನುಮಕೊಂಡ ಹಂಟರ್ ರಸ್ತೆಯಲ್ಲಿ ಉತ್ಖನನದ ವೇಳೆ ಬಾಲ ಹನುಮಂತನ ಪ್ರಾಚೀನ ವಿಗ್ರಹ ಪತ್ತೆಯಾಗಿದೆ. ಶಿವ ದೇವಾಲಯದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹನುಮಾನ್ ಮೂರ್ತಿ ಪತ್ತೆಯಾದ ನಂತರ ಸ್ಥಳೀಯರು ಸಂಭ್ರಮದಲ್ಲಿ ಮುಳುಗಿದ್ದಾರೆ. ಅಲ್ಲಿ ಈ ವಿಗ್ರಹವನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಸದ್ಯದಲ್ಲೇ ಬಾಲ ಹನುಮಂತನಿಗೆ ಮಂದಿರ ನಿರ್ಮಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More