AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಷ್ಪ ಸಿನಿಮಾ ಸ್ಟೈಲ್​ನಲ್ಲಿ ರಕ್ತ ಚಂದನ ಸ್ಮಗ್ಲಿಂಗ್: ಕಳ್ಳಸಾಗಣೆದಾರರ ಬೇಟೆಯಾಡಿದ ಪೊಲೀಸರು

ಪುಷ್ಪ ಸಿನಿಮಾ ಸ್ಟೈಲ್​ನಲ್ಲಿ ರಕ್ತ ಚಂದನ ಸ್ಮಗ್ಲಿಂಗ್: ಕಳ್ಳಸಾಗಣೆದಾರರ ಬೇಟೆಯಾಡಿದ ಪೊಲೀಸರು

ನವೀನ್ ಕುಮಾರ್ ಟಿ
| Edited By: |

Updated on: Feb 06, 2025 | 11:38 AM

Share

ಆಂಧ್ರದ ನಲ್ಲಮಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಮರಗಳ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಆಂಧ್ರ ಪೊಲೀಸರು ಸ್ಮಗ್ಲರ್​​​ಗಳನ್ನು ಕರ್ನಾಟಕದ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿವರೆಗೆ ಚೇಸ್​​​ ಮಾಡಿ ಬಂಧಿಸಿದ್ದಾರೆ. ರಕ್ತ ಚಂದನ ಜಪ್ತಿ ಮಾಡಿದ್ದಾರೆ. ನೀಲಗಿರಿ ತೋಪಿನಲ್ಲಿದ್ದ ಕೋಟಿ ಕೋಟಿ ಬೆಲೆ ಬಾಳುವ ರಕ್ತಚಂದನ ಜಪ್ತಿ ಮಾಡಲಾಗಿದೆ.

ದೇವನಹಳ್ಳಿ, ಫೆಬ್ರವರಿ 6: ಪುಷ್ಪ ಸಿನಿಮಾದ ರೀತಿಯಲ್ಲಿ ಆಂಧ್ರದ ನಲ್ಲಮಲ ಅರಣ್ಯದಿಂದ ಅಕ್ರಮವಾಗಿ ರಕ್ತಚಂದನ ಮರಗಳ ಸಾಗಾಟ ಮಾಡುತ್ತಿದ್ದವರನ್ನು ಬೇಟೆಯಾಡಿದ ಆಂಧ್ರದ ಚಿತ್ತೂರು ಪೊಲೀಸರು, ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ 150 ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ​​​ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಬಳಿ ರಕ್ತಚಂದನ ತುಂಡು ಜಪ್ತಿ ಮಾಡಲಾಗಿದೆ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More