ಆಂಧ್ರದಲ್ಲಿ ರೌಡಿ ಶೀಟರ್‌ಗಳನ್ನು ಹಿಡಿದು ಸ್ಥಳದಲ್ಲೇ ಲಾಠಿಯೇಟು ಕೊಟ್ಟ ಪೊಲೀಸರು

Updated on: May 26, 2025 | 10:11 PM

ಆಂಧ್ರಪ್ರದೇಶದಲ್ಲಿ ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳನ್ನು ಹಿಡಿದು, ರಸ್ತೆಯ ಮಧ್ಯದಲ್ಲೇ ಅವರಿಗೆ ಲಾಠಿಯೇಟು ನೀಡುತ್ತಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ಸ್ಥಳೀಯ ಮಾನವ ಹಕ್ಕುಗಳ ಗುಂಪುಗಳು ಈ ಘಟನೆಯನ್ನು ಖಂಡಿಸಿವೆ. ಪೊಲೀಸರು ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಹೈದರಾಬಾದ್, ಮೇ 26: ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ತೆನಾಲಿ ಟೂ ಟೌನ್ ಪೊಲೀಸರು ಮೂವರು ರೌಡಿ ಶೀಟರ್‌ಗಳಾದ ವಿಕ್ಟರ್, ಬಾಬುಲಾಲ್ ಮತ್ತು ರಾಕೇಶ್ ಅವರನ್ನು ಬಂಧಿಸಿದ್ದಾರೆ. ಈ ಘಟನೆ ಕೆಲವು ತಿಂಗಳುಗಳ ಹಿಂದೆ ನಡೆದಿದ್ದು, ಗಾಂಜಾ ಸೇವಿಸಿದ್ದ ಆರೋಪಿಗಳು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದರು. ಆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವಿಡಿಯೋ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯ ಮಾನವ ಹಕ್ಕುಗಳ ಗುಂಪುಗಳು ಈ ಘಟನೆಯನ್ನು ಖಂಡಿಸಿವೆ. ಪೊಲೀಸರು ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ