ಡಿವೈಡರ್​​ಗೆ ಗುದ್ದಿದ ಸಾರಿಗೆ ಬಸ್​​: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್​​, ಮುಂಬದಿ ಚಕ್ರಗಳು!

Edited By:

Updated on: Apr 02, 2026 | 11:26 AM

ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಮುಂಜಾನೆ ಆಂಧ್ರ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಧೋನಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ವೇಗವಾಗಿ ಡಿಕ್ಕಿ ಹೊಡೆದ ರಭಸಕ್ಕೆ ಮುಂಭಾಗದ ಚಕ್ರ ಮತ್ತು ಇಂಜಿನ್ ಕಿತ್ತುಬಂದಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹೈಗ್ರೌಂಡ್ಸ್ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಏಪ್ರಿಲ್​​ 02: ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಶಿವಾನಂದ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಅಧೋನಿಯಿಂದ ಅನಂತಪುರ ಮೂಲಕ ಬೆಂಗಳೂರಿಗೆ ಬರ್ತಿದ್ದ ಬಸ್​​ ಡಿವೈಡರ್​ಗೆ ಡಿಕ್ಕಿಯಾದ ರಭಸಕ್ಕೆ ಮುಂಭಾಗದ ಚಕ್ರ ಮತ್ತು ಇಂಜಿನ್ ಕಿತ್ತು ಬಂದಿದೆ. ಬಸ್​​ನಲ್ಲಿರುವ ಪ್ರಯಾಣಿಕರೆಲ್ಲವೂ ಸುರಕ್ಷಿತವಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

 

Follow Us
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More