AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ.. ಇಲ್ಲದಿದ್ರೆ ಮತ್ತಷ್ಟು ಎನ್‌ಕೌಂಟರ್‌ ಸಾಧ್ಯತೆ

ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ.. ಇಲ್ಲದಿದ್ರೆ ಮತ್ತಷ್ಟು ಎನ್‌ಕೌಂಟರ್‌ ಸಾಧ್ಯತೆ

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 19, 2024 | 4:40 PM

Share

ಮೋಸ್ಟ್‌ ವಾಂಟೆಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ನಕ್ಸಲ್‌ ನಿಗ್ರಹ ಪಡೆಯ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪಿತ್ತ ಬೈಲ್​ ಪ್ರದೇಶದಲ್ಲಿ ನಡೆದ ಗುಂಡಿನಚಕಮಕಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದು, ಇನ್ನುಳಿದ ಐದಾರು ನಕ್ಸಲರಿಗಾಗಿ ಎನ್​​ಎಫ್​ಐ ಶೋಧ ನಡೆಸಿದೆ.

ಉಡುಪಿ, (ನವೆಂಬರ್ 19): ನಕ್ಸಲ್‌ ನಾಯಕ ವಿಕ್ರಂ ಗೌಡ ನಕ್ಸಲ್‌ ನಿಗ್ರಹ ಪಡೆಯ ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪಿತ್ತ ಬೈಲ್​ ಪ್ರದೇಶದಲ್ಲಿ ನಕ್ಸಲರು ಬೀಡುಬಿಟ್ಟಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಹಲವು ದಿನಗಳಿಂದ ಎನ್​ಎಫ್​ಐ ನಡೆಸಿದ ಕಾರ್ಯಚರಣೆ ನಡೆಸಿತ್ತು. ಅದರಂತೆ ಇಂದು(ನವೆಂಬರ್ 19) ಎರಡೂ ಕಡೆಯಿಂದ ಗುಂಡಿನಚಕಮಕಿ ನಡೆದಿದ್ದು , ಇದರಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ. ಇನ್ನುಳಿದಂತೆ ಐದಾರು ನಕ್ಸರ್​ ಇರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಕಬ್ಬಿನಾಲೆಯ ಪಿತ್ತಬೈಲ್ ನಲ್ಲಿ ಎನ್​ಎಫ್​ಐ ಶೋಧ ಕಾರ್ಯ ನಡೆಸಿದೆ. ಇನ್ನು ಈ ಬಗ್ಗೆ ಐಎಸ್​ಡಿ ಐಜಿಪಿ ಡಿ.ರೂಪಾ ಪ್ರತಿಕ್ರಿಯಿಸಿದ್ದು, ಇನ್ನೂ 5-6 ಜನ ನಕ್ಸಲರು ಇದ್ದಾರೆ, ಅವರ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ. ನಕ್ಸಲರಿಗಾಗಿ ನಿರಂತರವಾಗಿ ಶೋಧ ನಡೆಸುತ್ತೇವೆ. ನಕ್ಸಲರ ಶರಣಾಗತಿಗೆ ಮೊದಲ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 19, 2024 04:39 PM

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More