AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ

ಅಮೀನ್​ ಸಾಬ್​
| Updated By: ವಿವೇಕ ಬಿರಾದಾರ|

Updated on: Aug 01, 2025 | 5:31 PM

Share

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದೂರ್ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಅಂಗನವಾಡಿ ಸಹಾಯಕಿ ಸಾವಿತ್ರಮ್ಮ, ಮಕ್ಕಳನ್ನು ಅಂಗನವಾಡಿಯೊಳಗೆ ಬೀಗ ಹಾಕಿ, ಜಮೀನು ಕೆಲಸಕ್ಕೆ ಹೋಗಿದ್ದರು. ಮಕ್ಕಳ ಅಳುವ ಶಬ್ದ ಕೇಳಿ ಸ್ಥಳೀಯರು ಮುಖ್ಯ ಸಹಾಯಕರಿಗೆ ತಿಳಿಸಿದರು. ಮುಖ್ಯ ಸಹಾಯಕರು ಬಂದು ಬಾಗಿಲು ತೆರೆದರು. ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ, ಆಗಸ್ಟ್​ 01: ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಗುರುಮಠಕಲ್​ ತಾಲೂಕಿನ ಬುದೂರ್​ ಗ್ರಾಮದಲ್ಲಿ ನಡೆದಿದೆ. ಗುರುವಾರ (ಜು.31) ಮಾಸಿಕ ಸಭೆ ನಿಮಿತ್ತ ಅಂಗನವಾಡಿ ಮುಖ್ಯ ಸಹಾಯಕಿ ಬೇರೆ ಗ್ರಾಮಕ್ಕೆ ಹೋಗಿದ್ದರು. ಅಂಗನವಾಡಿ ಮುಖ್ಯ ಸಹಾಯಕಿ ಅತ್ತ ಹೋಗುತ್ತಿದ್ದಂತೆ ಇತ್ತ, ಸಹಾಯಕಿ ಸಾವಿತ್ರಮ್ಮ ಮಕ್ಕಳನ್ನು ಅಂಗನವಾಡಿಯಲ್ಲಿ ಲಾಕ್​ ಮಾಡಿ ಜಮೀನು ಕೆಲಸಕ್ಕೆ ಹೋಗಿದ್ದಾಳೆ. ಆಗ, ಮಕ್ಕಳು ಅಳಲು ಆರಂಭಿಸಿದವು. ಮಕ್ಕಳು ಅಳುತ್ತಿರುವ ಶಬ್ದ ಕೇಳಿ ಸ್ಥಳೀಯರು ಅಂಗನವಾಡಿ ಮುಖ್ಯ ಸಹಾಯಕಿಗೆ ವಿಷಯ ತಿಳಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಅಂಗನವಾಡಿಗೆ ಆಗಮಿಸಿದ ಮುಖ್ಯ ಸಹಾಯಕಿ ಬಾಗಿಲು ತೆರೆದಿದ್ದಾರೆ. ಮಕ್ಕಳನ್ನು ಲಾಕ್​ ಮಾಡಿದ ಸಹಾಯಕಿ ಸಾವಿತ್ರಮ್ಮ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.