ಜಮೀನು ವಿವಾದ; ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ

Updated on: Nov 19, 2024 | 7:10 PM

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಜಮೀನು ವಿವಾದದಿಂದ ಕೋಪಗೊಂಡ ರಿಕ್ಷಾ ಚಾಲಕ ಬಿಆರ್‌ಎಸ್ ನಾಯಕಿಯ ಪತಿಗೆ ಸುತ್ತಿಗೆಯಿಂದ ಹೊಡೆದು, ಹಲ್ಲೆ ನಡೆಸಿದ್ದಾನೆ. ಸೋಮವಾರ ನಿಜಾಮಾಬಾದ್‌ನ ಸ್ಥಳೀಯ ಕಾರ್ಪೊರೇಟರ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಅವರ ತಲೆಗೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ರಿಕ್ಷಾ ಚಾಲಕನೊಬ್ಬ ನಿಜಾಮಾಬಾದ್ ಪುರಸಭೆಯ ಮಾಜಿ ಮೇಯರ್ ಪತಿ ಹಾಗೂ ಬಿಆರ್​ಎಸ್​ ನಾಯಕಿ ದಂಡು ನೀತು ಕಿರಣ್ ಅವರ ಪತಿ ದಂಡು ಚಂದ್ರಶೇಖರ್ ಮೇಲೆ ಸುತ್ತಿಗೆಯಿಂದ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಸೋಮವಾರ ನಿಜಾಮಾಬಾದ್‌ನ ಸ್ಥಳೀಯ ಕಾರ್ಪೊರೇಟರ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಅವರ ತಲೆಗೆ ತೀವ್ರ ಗಾಯಗಳಾಗಿವೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More