ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಅನಿರುದ್ಧ್​ ಜತ್ಕರ್​

|

Updated on: Oct 17, 2023 | 4:09 PM

‘ಬಾಳೆ ಬಂಗಾರ’ ಸಾಕ್ಷ್ಯಚಿತ್ರಕ್ಕೆ ಅನಿರುದ್ಧ್​ ಜತ್ಕರ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ನ್ಯಾಷನಲ್​ ಅವಾರ್ಡ್​ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್​ ಜತ್ಕರ್​ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ.

69ನೇ ಸಾಲಿನ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇಂದು (ಅಕ್ಟೋಬರ್​ 17) ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾರತಿ ವಿಷ್ಣುವರ್ಧನ್​ (Bharathi Vishnuvardhan) ಅವರ ಸಾಧನೆ ಹಾಗೂ ಜೀವನದ ಬಗ್ಗೆ ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರ ನಿರ್ಮಾಣ ಆಗಿದ್ದು ಇದಕ್ಕೆ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ನಿರ್ದೇಶನ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ನ್ಯಾಷನಲ್​ ಅವಾರ್ಡ್​ (69th National Film Award) ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಿರುದ್ಧ್​ ಜತ್ಕರ್​ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಅನಿರುದ್ಧ್​ ಜತ್ಕರ್​ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on