‘ಸಿಂಹ ಗುಹೆ’ ಸಿನಿಮಾದ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಅನಿರುದ್ಧ್​ ಜತ್ಕರ್​

‘ಈ ಗೀತೆಯನ್ನು ನೋಡಿ ಬಹಳ ಖುಷಿ ಆಯಿತು. ವಿಷ್ಣುವರ್ಧನ್​ ಅವರ ಮೇಲೆ ಚಿತ್ರತಂಡದವರು ಹೊಂದಿರುವ ಅಭಿಮಾನದಿಂದ ನಾನು ಈ ಹೊಸ ತಂಡದವರಿಗೆ ಹಾರೈಸಲು ಬಂದಿದ್ದೇನೆ. ಹಾಡಿನ ಶೂಟಿಂಗ್​ ಸ್ಥಳ ತುಂಬ ಚೆನ್ನಾಗಿದೆ. ಚಿತ್ರೀಕರಣದ ಶೈಲಿ ಬಹಳ ಚೆನ್ನಾಗಿದೆ. ಸಿಂಹ ಗುಹೆ ಚಿತ್ರ ನೋಡಲು ನಾನು ಬರುತ್ತೇನೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ನಟ ಅನಿರುದ್ಧ್​ ಜತ್ಕರ್​ ಶುಭ ಕೋರಿದ್ದಾರೆ.

‘ಸಿಂಹ ಗುಹೆ’ ಸಿನಿಮಾದ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಅನಿರುದ್ಧ್​ ಜತ್ಕರ್​
|

Updated on: Mar 28, 2024 | 9:06 PM

ಈ ಮೊದಲು ‘ಸಮರ್ಥ’, ‘ತಾಜಾ’ ಸಿನಿಮಾಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರು ಈಗ ‘ಸಿಂಹ ಗುಹೆ’ (Simha Guhe) ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇದು ಅವರ 3ನೇ ಸಿನಿಮಾ. ನಿವಿಶ್ಕಾ ಪಾಟೀಲ್, ರವಿ ಶಿರೂರು ಅವರು ಈ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆ ಮಾಡಲಾಯಿತು. ಆ ಕಾರ್ಯಕ್ರಮಕ್ಕೆ ನಟ ಅನಿರುದ್ಧ್​ ಜತ್ಕರ್ (Anirudh Jatkar) ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಿರ್ದೇಶಕ ಎಸ್​ಜಿಆರ್​ ಅವರು ವಿಷ್ಣುವರ್ಧನ್​ ಅವರ ದೊಡ್ಡ ಅಭಿಮಾನಿ. ಆ ಕಾರಣಕ್ಕೆ ಸಿನಿಮಾದ ಶೀರ್ಷಿಕೆಯನ್ನು ‘ಸಿಂಹ ಗುಹೆ’ ಎಂದು ಇಡಲಾಗಿದೆ. ವಿಷ್ಣುವರ್ಧನ್​ (Vishnuvardhan) ಅವರ ಅಳಿಯ ಅನಿರುದ್ಧ್ ಅವರಿಂದ ಸಾಂಗ್​ ಬಿಡುಗಡೆ ಮಾಡಿಸಿ ಅವರು ಖುಷಿಪಟ್ಟಿದ್ದಾರೆ. ಈ ಸಿನಿಮಾಗೆ ಎ.ಸಿ. ಮಹೇಂದರ್ ಛಾಯಾಗ್ರಹಣ ಹಾಗೂ ಸತೀಶ್ ಆರ್ಯನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಈ ಹಾಡನ್ನು ನೋಡಿ ಬಹಳ ಸಂತೋಷ ಆಯಿತು. ವಿಷ್ಣುವರ್ಧನ್​ ಮೇಲೆ ತಂಡದವರು ಇಟ್ಟಿರುವ ಅಭಿಮಾನದ ಕಾರಣದಿಂದ ಹೊಸ ತಂಡದವರಿಗೆ ಮನಸಾರೆ ಹಾರೈಸಲು ಬಂದಿದ್ದೇನೆ. ಹಾಡಿನ ಚಿತ್ರೀಕರಣ ಸ್ಥಳ ತುಂಬಾ ಚೆನ್ನಾಗಿದೆ. ಮೇಕಿಂಗ್​ ಶೈಲಿ ಬಹಳ ಚೆನ್ನಾಗಿದೆ. ಸಿನಿಮಾ ನೋಡಲು ಕೂಡ ಬರುತ್ತೇನೆ. ಈ ತಂಡದ ಪ್ರಯತ್ನ ನನಗೆ ಇಷ್ಟ ಆಯಿತು. ಇವರಿಗೆ ಯಶಸ್ಸು ಸಿಗಲಿ’ ಎಂದು ಅನಿರುದ್ಧ್​ ಜತ್ಕರ್​ ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್