ಅಭಿಮಾನ್ ಸ್ಟುಡಿಯೋದಲ್ಲಿ ಮತ್ತೆ ವಿಷ್ಣು ಮಂಟಪ ನಿರ್ಮಾಣ ಮಾಡುತ್ತೇವೆ: ಅನಿರುದ್ಧ್

Updated on: Sep 11, 2025 | 9:24 PM

ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದು ಖುಷಿಯ ವಿಷಯ. ಆದರೆ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣು ಸಮಾಧಿಯನ್ನು ನೆಲಸಮ ಆಗಿದ್ದು ನೋವಿನ ಸಂಗತಿ. ಆ ಜಾಗದಲ್ಲಿ ಮತ್ತೆ ಸಮಾಧಿ ನಿರ್ಮಾಣ ಮಾಡಲು ಅವರ ಕುಟುಂಬದವರು ಆಲೋಚಿಸಿದ್ದಾರೆ.

ನಟ ವಿಷ್ಣುವರ್ಧನ್ (Vishnuvardhan) ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಘೋಷಣೆ ಮಾಡಿರುವುದು ಖುಷಿಯ ವಿಷಯ. ಆದರೆ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣು ಸಮಾಧಿ ನೆಲಸಮ ಆಗಿದ್ದು ನೋವಿನ ಸಂಗತಿ. ಆ ಜಾಗದಲ್ಲಿ ಮತ್ತೆ ಸಮಾಧಿ ನಿರ್ಮಾಣ ಮಾಡಲು ಅವರ ಕುಟುಂಬದವರು ಆಲೋಚಿಸಿದ್ದಾರೆ. ‘ಅಭಿಮಾನ್ ಸ್ಟುಡಿಯೋದಲ್ಲಿ ಅದೇ ರೀತಿಯ ಮಂಟಪ ಮತ್ತೆ ನಿರ್ಮಾಣ ಆಗಬೇಕು. ಅದಕ್ಕೆ ಅವಕಾಶ ನೀಡಿ ಎಂದು ಮುಖ್ಯಮಂತ್ರಿಗಳ ಬಳಿ ನಾವು ಕೇಳಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಂಟಪ ನಿರ್ಮಾಣ ಮಾಡುವ ಖರ್ಚನ್ನು ನಾವೇ ನೋಡಿಕೊಳ್ಳುತ್ತೇವೆ’ ಎಂದು ಅನಿರುದ್ಧ್ (Anirudh Jatkar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More