‘ಸಮುದ್ರಂ’ ಸಿನಿಮಾ ವಿವಾದ; ಈ ಕಿರಿಕ್​ ಶುರುವಾಗಿದ್ದು ಹೇಗೆ ಎಂಬುದನ್ನು ವಿವರಿಸಿದ ಅನಿತಾ ಭಟ್​

‘ಸಮುದ್ರಂ’ ಸಿನಿಮಾ ವಿವಾದ; ಈ ಕಿರಿಕ್​ ಶುರುವಾಗಿದ್ದು ಹೇಗೆ ಎಂಬುದನ್ನು ವಿವರಿಸಿದ ಅನಿತಾ ಭಟ್​
|

Updated on: Sep 04, 2023 | 5:43 PM

‘ಸಮುದ್ರಂ’ ಚಿತ್ರತಂಡದಲ್ಲಿ ವೈಮನಸ್ಸು ಉಂಟಾಗಿದೆ. ಆ ಕುರಿತು ಅನಿತಾ ಭಟ್​ ಪ್ರತಿಕ್ರಿಯೆ ನೀಡಿದ್ದಾರೆ. ‘ಮೋಷನ್​ ಪೋಸ್ಟರ್​ ಲಾಂಚ್​ ಮಾಡಿಸಿದ ಬಳಿಕ ಎಲ್ಲ ಕಡೆ ನನ್ನ ಹೆಸರು ಬಂತು. ತಮ್ಮ ಹೆಸರು ಬಂದಿಲ್ಲ ಎಂಬ ಕಾರಣಕ್ಕೆ ರಾಜಲಕ್ಷ್ಮಿ ಅವರಿಗೆ ಕೀಳರಿಮೆ ಶುರುವಾಯಿತು ಎನಿಸುತ್ತದೆ’ ಎಂದು ಅನಿತಾ ಭಟ್​ ಹೇಳಿದ್ದಾರೆ.

ನಟಿ ಅನಿತಾ ಭಟ್​ (Anitha Bhat) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ‘ಸಮುದ್ರಂ’ ಸಿನಿಮಾ (Samudram Movie) ಈಗ ವಿವಾದಕ್ಕೆ ಸಿಲುಕಿದೆ. ನಿರ್ಮಾಪಕಿ ರಾಜಲಕ್ಷ್ಮಿ ಅವರು ಚಿತ್ರತಂಡದ ಇನ್ನುಳಿದವರ ಮೇಲೆ ಆರೋಪ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಅನಿತಾ ಭಟ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕಿರಿಕ್​ ಹೇಗೆ ಶುರುವಾಯಿತು ಎಂಬುದನ್ನು ಅನಿತಾ ಭಟ್​ ಅವರು ವಿವರಿಸಿದ್ದಾರೆ. ‘ಮೋಷನ್​ ಪೋಸ್ಟರ್​ ಲಾಂಚ್​ ಮಾಡಿಸಿದ ಬಳಿಕ ಎಲ್ಲ ಕಡೆ ನನ್ನ ಹೆಸರು ಬಂತು. ತಮ್ಮ ಹೆಸರು ಬಂದಿಲ್ಲ ಎಂಬ ಕಾರಣಕ್ಕೆ ರಾಜಲಕ್ಷ್ಮಿ ಅವರಿಗೆ ಕೀಳರಿಮೆ ಶುರುವಾಯಿತು ಎನಿಸುತ್ತದೆ. ಆಗ ಅವರು ಪೂರ್ಣ ಪ್ರಮಾಣದಲ್ಲಿ ನಿರ್ಮಾಪಕಿ ಆಗಲು ಮುಂದೆಬಂದರು. ಅಂದು ಮಾತನಾಡಿಕೊಂಡು ಹೋದವರು ಎಲ್ಲವನ್ನೂ ಎತ್ತಿಕೊಂಡು ಹೋದರು. ಈಗ ಹಾರ್ಡ್​ ಡಿಸ್ಕ್​ ಇಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ಚೇಂಬರ್​ಗೂ ದೂರು ನೀಡಲಾಗಿದೆ’ ಎಂದು ಅನಿತಾ ಭಟ್​ ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ