ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ; ತನಿಖೆಗೆ ಸಿಎಂ ಆದೇಶ
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸಮಾಜ ವಿರೋಧಿಗಳು ಕೆಡವಿದ್ದಾರೆ. ಅನ್ನಮಯ್ಯ ಜಿಲ್ಲೆಯಲ್ಲಿ 16ನೇ ಶತಮಾನದಷ್ಟು ಹಿಂದಿನ ಪುರಾತನ ದೇವಾಲಯವನ್ನು ಕೆಲವು ಅಪರಿಚಿತ ಆಕ್ರಮಣಕಾರರು ಧ್ವಂಸಗೊಳಿಸಿದ್ದಾರೆ.
ಹೈದರಾಬಾದ್: ಅನ್ನಮಯ್ಯ ಜಿಲ್ಲೆಯ ಚೆರುವು ಮಂಡಲದಲ್ಲಿರುವ ಶ್ರೀ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕದಿರಿ ನಾಣಿಕೋಟ ಪಂಚಾಯತ್ ವ್ಯಾಪ್ತಿಯ ಕಾನುಗೊಂಡ ಅರಣ್ಯ ಪ್ರದೇಶದಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. 2 ದಿನಗಳ ಹಿಂದೆ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸ ಮಾಡುವ ಯತ್ನ ನಡೆದಿತ್ತು ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನುಗೊಂಡ ಅರಣ್ಯ ಪ್ರದೇಶದಲ್ಲಿ 16ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಸ್ಥಾನದ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

