ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ; ತನಿಖೆಗೆ ಸಿಎಂ ಆದೇಶ

Updated on: Oct 16, 2024 | 9:30 PM

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸಮಾಜ ವಿರೋಧಿಗಳು ಕೆಡವಿದ್ದಾರೆ. ಅನ್ನಮಯ್ಯ ಜಿಲ್ಲೆಯಲ್ಲಿ 16ನೇ ಶತಮಾನದಷ್ಟು ಹಿಂದಿನ ಪುರಾತನ ದೇವಾಲಯವನ್ನು ಕೆಲವು ಅಪರಿಚಿತ ಆಕ್ರಮಣಕಾರರು ಧ್ವಂಸಗೊಳಿಸಿದ್ದಾರೆ.

ಹೈದರಾಬಾದ್: ಅನ್ನಮಯ್ಯ ಜಿಲ್ಲೆಯ ಚೆರುವು ಮಂಡಲದಲ್ಲಿರುವ ಶ್ರೀ ಅಭಯಾಂಜನೇಯ ಸ್ವಾಮಿ ದೇವಸ್ಥಾನದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕದಿರಿ ನಾಣಿಕೋಟ ಪಂಚಾಯತ್ ವ್ಯಾಪ್ತಿಯ ಕಾನುಗೊಂಡ ಅರಣ್ಯ ಪ್ರದೇಶದಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. 2 ದಿನಗಳ ಹಿಂದೆ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸ ಮಾಡುವ ಯತ್ನ ನಡೆದಿತ್ತು ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನುಗೊಂಡ ಅರಣ್ಯ ಪ್ರದೇಶದಲ್ಲಿ 16ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಸ್ಥಾನದ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More