AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಳಳ್ಳಿ ಯುವತಿಯರ ಹತ್ಯೆಯಂಥ ಘಟನೆ ಬೆಳಗಾವಿಯಲ್ಲೂ ನಡೆಯಲು ಪೊಲೀಸ್ ಕಾಯುತ್ತಿದ್ದೆಯೇ?

ಹುಬ್ಳಳ್ಳಿ ಯುವತಿಯರ ಹತ್ಯೆಯಂಥ ಘಟನೆ ಬೆಳಗಾವಿಯಲ್ಲೂ ನಡೆಯಲು ಪೊಲೀಸ್ ಕಾಯುತ್ತಿದ್ದೆಯೇ?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 25, 2024 | 10:41 AM

Share

ಹುಬ್ಬಳ್ಳಿ ಯುವತಿಯರಿಗೆ ಆದ ಗತಿ ನಿನಗೂ ಆಗುತ್ತದೆ, ಪೊಲೀಸರು ನನ್ನ ಕಿಸೆಯಲ್ಲಿದ್ದಾರೆ ಎಂದು ತಿಪ್ಪಣ್ಣ ಬೆದರಿಕೆ ಕೂಡ ಹಾಕಿದ್ದಾನಂತೆ. ಹುಬ್ಬಳ್ಳಿಯಂಥ ಘಟನೆಗಳು ಪುನರಾವರ್ತನೆಯಾಗಬಾರದು ಅಂತಾದ್ರೆ ಪರಮೇಶ್ವರ್ ಅವರು ಕೂಡಲೇ ಬೆಳಗಾವಿ ಪೊಲೀಸ್ ವರಿಷ್ಠರೊಂದಿಗೆ ಮಾತಾಡಬೇಕು.

ಬೆಳಗಾವಿ: ನಮ್ಮ ರಾಜ್ಯದ ಪೊಲೀಸರಿಗೆ ಏನಾಗಿದೆ ಅಂತ ಗೃಹ ಸಚಿವ ಜಿ ಪರಮೇಶ್ವರ್ ಅವರೇ ಹೇಳಬೇಕು. ಅವರ ನಿರ್ಲಿಪ್ತತೆ ಮತ್ತು ಬೇಜವಾಬ್ದಾರಿಯಿಂದಾಗಿ ಪ್ರೀತಿ ಪ್ರೇಮ ವಿಷಯದಲ್ಲಿ ಹುಚ್ಚು ಯುವಕರಿಂದ ಕೇವಲ ಒಂದು ತಿಂಗಳ ಅವಧಿಯಲ್ಲಿ ಹುಬ್ಳಳ್ಳಿಯ ಇಬ್ಬರು ಯುವತಿಯರ ಹತ್ಯೆಯಾಗಿದೆ. ಬೆಳಗಾವಿಯ ಕಿಣ್ಣೈ ಗ್ರಾಮದಲ್ಲಿ ಇಂಥದ್ದೇ ಪ್ರಕರಣ ನಡೆಯುತ್ತಿದೆ. ಗ್ರಾಮಮ ತಿಪ್ಪಣ್ಣ ಡೋಕ್ರೆ ಹೆಸರಿನ ಯುವಕನೊಬ್ಬ ಯುವತಿಯೊಬ್ಳಳನ್ನು ನನ್ನನ್ನು ಪ್ರೀತಿಸು, ಮದುವೆಯಾಗೋಣ ಅಂತ ಮೂರು ವರ್ಷದಿಂದ ದುಂಬಾಲು ಬಿದ್ದಿದ್ದಾನೆ ಮತ್ತು ಅಕೆಯನ್ನು ಮಾನಸಿಕ ಮತ್ತು ದೈಹಿಕ ಹಿಂಸೆಗೆ ಗುರಿಮಾಡಿದ್ದಾನೆ. ನಿನ್ನೆ ಪಾನಮತ್ತನಾಗಿ ಬಂದು ಯುವತಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಅವನ ದಾಂಧಲೆಯಿಂದ ಕಿಟಕಿ ಗಾಜುಗಳು ಚೂರಾಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಮ್ಮ ಬೆಳಗಾವಿ ವರದಿಗಾರ ಯುವತಿಯ ಮನೆಗೆ ಭೇಟಿ ನೀಡಿ ಆಕೆಯ ಸಂಬಂಧಿಯೊಬ್ಬರ ಜೊತೆ ಮಾತಾಡಿದ್ದಾರೆ. ಹುಬ್ಬಳ್ಳಿ ಯುವತಿಯರಿಗೆ ಆದ ಗತಿ ನಿನಗೂ ಆಗುತ್ತದೆ, ಪೊಲೀಸರು ನನ್ನ ಕಿಸೆಯಲ್ಲಿದ್ದಾರೆ ಎಂದು ತಿಪ್ಪಣ್ಣ ಬೆದರಿಕೆ ಕೂಡ ಹಾಕಿದ್ದಾನಂತೆ. ಹುಬ್ಬಳ್ಳಿಯಂಥ ಘಟನೆಗಳು ಪುನರಾವರ್ತನೆಯಾಗಬಾರದು ಅಂತಾದ್ರೆ ಪರಮೇಶ್ವರ್ ಅವರು ಕೂಡಲೇ ಬೆಳಗಾವಿ ಪೊಲೀಸ್ ವರಿಷ್ಠರೊಂದಿಗೆ ಮಾತಾಡಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಜಿ ಪರಮೇಶ್ವರ್​

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.