ಕುಮಟಾ ಬಳಿ ಗುಡ್ಡಕುಸಿತದ ದೃಶ್ಯ ಮೊಬೈಲ್ ಫೋನ್ ಕೆಮೆರಾದಲ್ಲಿ ಸೆರೆ, ಅನಾಹುತಗಳಿಗೆ ಕೊನೆ ಯಾವಾಗ?

ಕುಮಟಾ ಬಳಿ ಗುಡ್ಡಕುಸಿತದ ದೃಶ್ಯ ಮೊಬೈಲ್ ಫೋನ್ ಕೆಮೆರಾದಲ್ಲಿ ಸೆರೆ, ಅನಾಹುತಗಳಿಗೆ ಕೊನೆ ಯಾವಾಗ?
|

Updated on: Jul 18, 2024 | 7:59 PM

ಗುಡ್ಡ ಕುಸಿತ ದುರ್ಘಟನೆಗಳ ಬಗ್ಗೆ ಸರ್ಕಾರ ನಿರ್ಲಿಪ್ತ ಭಾವ ತಳೆದಿರುವುದು ಸೋಜಿಗ ಮೂಡಿಸುತ್ತದೆ. ಮೊನ್ನೆ ಇದೇ ಜಿಲ್ಲೆಯ ಶಿರೂರು ಬಳಿ ನಡೆದ ಗುಡ್ಡಕುಸಿತದ ದುರ್ಘಟನೆಯಲ್ಲಿ ಸುಮಾರು 20 ಜನ ಬಲಿಯಾಗಿರುವ ಶಂಕೆ ಇದೆ. ಮಳೆಯಿಂದಾಗಿ ಅಲ್ಲೂ ತೆರವು ಕಾರ್ಯಾಚರಣೆ ಸ್ಥಗಿತಗೊಂಡಿದೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ಪರ್ವ ಮುಂದುವರಿದಿದೆ ಮತ್ತು ಗುಡ್ಡಗಳ ಕೆಳಗಿನ ರಸ್ತೆ ಮತ್ತು ಹೆದ್ದಾರಿಗಳ ಮೇಲೆ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಗುಡ್ಡಗಾಡು ಪ್ರದೇಶವನ್ನು ದಾಟುತ್ತಿದ್ದಾರೆ. ಯಾವ ನಿಮಿಷ ಗುಡ್ಡ ಕುಸಿಯುತ್ತದೆಯೋ? ಇಲ್ನೋಡಿ, ಜಿಲ್ಲೆಯ ಕುಮಟಾ ತಾಲ್ಲುಕಿನ ಬರ್ಗಿ ಎಂಬಲ್ಲಿ ಗುಡ್ಡದ ಒಂದು ಭಾಗ ಕುಸಿಯುತ್ತಿರುವ ದೃಶ್ಯ ಕೆಮೆರಾದಲ್ಲಿ ಸೆರೆಯಾಗಿದೆ. ಗುಡ್ಡದ ಕೆಳಗೆ ನಿಂತಿರುವ ಕೆಲ ಜನರ ಪೈಕಿ ಒಬ್ಬರು ತಮ್ಮ ಮೊಬೈಲ್ ಫೋನಲ್ಲಿ ಕುಸಿಯುತ್ತಿರುವ ಗುಡ್ಡದ ದೃಶ್ಯ ಸೆರೆ ಹಿಡಿದಿದ್ದಾರೆ. ಗುಡ್ಡ ಕುಸಿತದ ಹಲವಾರು ಪ್ರಕರಣಗಳು ಈ ಮಳೆಗಾಲದಲ್ಲ್ಲಿ ಜರುಗುತ್ತಿವೆ. ನಮ್ಮ ಉತ್ತರ ಕನ್ನಡ ಜಿಲ್ಲಾ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಕಾರವಾರ ಮತ್ತು ಕುಮಟಾ ನಡುವಿವ ರಸ್ತೆ ಬಂದ್ ಆಗಿ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ಒಂದೇ ಸಮ ಸುರಿಯುತ್ತಿರುವ ಮಳೆಯ ಕಾರಣ ತೆರವು ಕಾರ್ಯಾಚರಣೆ ಪ್ರಭಾವಕ್ಕೊಳಗಾಗಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಗಳಿಂದಾಗಿ ಅಮಾಯಕರು ಬಲಿಯಾಗುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಂಗಳೂರು: ಭಾರೀ ಮಳೆಯಿಂದ ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ: ಮೃತಪಟ್ಟವರ ಸಂಖ್ಯೆ 3 ಕ್ಕೇರಿಕೆ

Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ