‘ನಾನು ಕೈ ಎತ್ತಿಲ್ಲ, ಅವರೇ ಬಿದ್ದರು’: ನಿರ್ಮಾಪಕರ ಗೋವಾ ಗಲಾಟೆ ಬಗ್ಗೆ ಆಂತರ್ಯ ಸತೀಶ್​ ಪ್ರತಿಕ್ರಿಯೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಇತ್ತೀಚೆಗೆ ಗೋವಾಗೆ ತೆರಳಿದ್ದರು. ಈ ವೇಳೆ ನಿರ್ಮಾಪಕರ ನಡುವೆ ಗಲಾಟೆ ಆಗಿದೆ. ಆಂತರ್ಯ ಸತೀಶ್​ ಅವರು ಎ. ಗಣೇಶ್​ ಮತ್ತು ರಥಾವರ ಮಂಜು ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಂತರ್ಯ ಸತೀಶ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಾನು ಕೈ ಎತ್ತಿಲ್ಲ, ಅವರೇ ಬಿದ್ದರು’: ನಿರ್ಮಾಪಕರ ಗೋವಾ ಗಲಾಟೆ ಬಗ್ಗೆ ಆಂತರ್ಯ ಸತೀಶ್​ ಪ್ರತಿಕ್ರಿಯೆ
| Updated By: ಮದನ್​ ಕುಮಾರ್​

Updated on: May 29, 2024 | 10:12 PM

ಕರ್ನಾಟಕ ಫಿಲ್ಮ್​ ಚೇಂಬರ್(Karnataka Film Chamber of Commerce) ಪದಾಧಿಕಾರಿಗಳು ಕೆಲವೇ ದಿನಗಳ ಹಿಂದೆ ಗೋವಾಗೆ ತೆರಳಿದ್ದರು. ಎಲ್ಲರೂ ಒಟ್ಟಾಗಿ ಇರುವ ಸಂದರ್ಭದಲ್ಲಿ ಕೆಲವು ನಿರ್ಮಾಪಕರ ನಡುವೆ ಮಾತಿನ ಚಕಮಕಿ ನಡೆಯಿತು. ಪಾರ್ಟಿ ನಡೆಯುವ ಸಂದರ್ಭದಲ್ಲಿ ಎ. ಗಣೇಶ್ (A Ganesh)​ ಹಾಗೂ ರಥಾವರ ಮಂಜುನಾಥ್​ ಮೇಲೆ ಆಂತರ್ಯ ಸತೀಶ್​ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ತಮ್ಮ ಮೇಲಿನ ಆರೋಪಕ್ಕೆ ಈಗ ಆಂತರ್ಯ ಸತೀಶ್​ ಅವರು ಪ್ರತಿಕ್ರಿಯಿಸಿದ್ದಾರೆ. ‘ಗೋವಾ ಟ್ರಿಪ್​ನಲ್ಲಿ ಪಾರ್ಟಿ ಮಾಡುವಾಗ ನಾನು ಡ್ಯಾನ್ಸ್​ ಮಾಡುತ್ತಿದ್ದೆ. ಅವರು ಏಕಾಏಕಿ ಬಂದು ನನಗೆ ಬೈಯ್ದರು. ರಥಾವರ ಮಂಜುನಾಥ್​ ಮತ್ತು ಎ. ಗಣೇಶ್​ ಅವರು ನನ್ನನ್ನು ರೇಗಿಸಿದರು. ಆಗ ಅವರು ಚೆನ್ನಾಗಿ ಕುಡಿದಿದ್ದರು. ನಾನು ಅವರ ಮೇಲೆ ಕೈ ಎತ್ತಿಲ್ಲ. ನೂಕಾಟದಲ್ಲಿ ಅವರೇ ಕೆಳಗಡೆ ಬಿದ್ದರು. ಅವರವರೇ ತಳ್ಳಾಟ ಆಡಿದರು. ಅವರು ಹೇಳುತ್ತಿರುವುದೆಲ್ಲ ಸುಳ್ಳು. ಸಿಸಿಟಿವಿ ದೃಶ್ಯ ತೆಗೆಸಿ ನೋಡಿದರೆ ಗೊತ್ತಾಗುತ್ತದೆ’ ಎಂದು ಆಂತರ್ಯ ಸತೀಶ್​ (Antharya Sathish) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಜಮೀನಿಗೆ ₹ 62 ಕೋಟಿ ಕೇಳುವ ಸಿಎಂ ರೈತರ ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘