‘ನಾನು ಕೈ ಎತ್ತಿಲ್ಲ, ಅವರೇ ಬಿದ್ದರು’: ನಿರ್ಮಾಪಕರ ಗೋವಾ ಗಲಾಟೆ ಬಗ್ಗೆ ಆಂತರ್ಯ ಸತೀಶ್​ ಪ್ರತಿಕ್ರಿಯೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಇತ್ತೀಚೆಗೆ ಗೋವಾಗೆ ತೆರಳಿದ್ದರು. ಈ ವೇಳೆ ನಿರ್ಮಾಪಕರ ನಡುವೆ ಗಲಾಟೆ ಆಗಿದೆ. ಆಂತರ್ಯ ಸತೀಶ್​ ಅವರು ಎ. ಗಣೇಶ್​ ಮತ್ತು ರಥಾವರ ಮಂಜು ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಂತರ್ಯ ಸತೀಶ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಾನು ಕೈ ಎತ್ತಿಲ್ಲ, ಅವರೇ ಬಿದ್ದರು’: ನಿರ್ಮಾಪಕರ ಗೋವಾ ಗಲಾಟೆ ಬಗ್ಗೆ ಆಂತರ್ಯ ಸತೀಶ್​ ಪ್ರತಿಕ್ರಿಯೆ
| Updated By: ಮದನ್​ ಕುಮಾರ್​

Updated on: May 29, 2024 | 10:12 PM

ಕರ್ನಾಟಕ ಫಿಲ್ಮ್​ ಚೇಂಬರ್(Karnataka Film Chamber of Commerce) ಪದಾಧಿಕಾರಿಗಳು ಕೆಲವೇ ದಿನಗಳ ಹಿಂದೆ ಗೋವಾಗೆ ತೆರಳಿದ್ದರು. ಎಲ್ಲರೂ ಒಟ್ಟಾಗಿ ಇರುವ ಸಂದರ್ಭದಲ್ಲಿ ಕೆಲವು ನಿರ್ಮಾಪಕರ ನಡುವೆ ಮಾತಿನ ಚಕಮಕಿ ನಡೆಯಿತು. ಪಾರ್ಟಿ ನಡೆಯುವ ಸಂದರ್ಭದಲ್ಲಿ ಎ. ಗಣೇಶ್ (A Ganesh)​ ಹಾಗೂ ರಥಾವರ ಮಂಜುನಾಥ್​ ಮೇಲೆ ಆಂತರ್ಯ ಸತೀಶ್​ ಅವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ತಮ್ಮ ಮೇಲಿನ ಆರೋಪಕ್ಕೆ ಈಗ ಆಂತರ್ಯ ಸತೀಶ್​ ಅವರು ಪ್ರತಿಕ್ರಿಯಿಸಿದ್ದಾರೆ. ‘ಗೋವಾ ಟ್ರಿಪ್​ನಲ್ಲಿ ಪಾರ್ಟಿ ಮಾಡುವಾಗ ನಾನು ಡ್ಯಾನ್ಸ್​ ಮಾಡುತ್ತಿದ್ದೆ. ಅವರು ಏಕಾಏಕಿ ಬಂದು ನನಗೆ ಬೈಯ್ದರು. ರಥಾವರ ಮಂಜುನಾಥ್​ ಮತ್ತು ಎ. ಗಣೇಶ್​ ಅವರು ನನ್ನನ್ನು ರೇಗಿಸಿದರು. ಆಗ ಅವರು ಚೆನ್ನಾಗಿ ಕುಡಿದಿದ್ದರು. ನಾನು ಅವರ ಮೇಲೆ ಕೈ ಎತ್ತಿಲ್ಲ. ನೂಕಾಟದಲ್ಲಿ ಅವರೇ ಕೆಳಗಡೆ ಬಿದ್ದರು. ಅವರವರೇ ತಳ್ಳಾಟ ಆಡಿದರು. ಅವರು ಹೇಳುತ್ತಿರುವುದೆಲ್ಲ ಸುಳ್ಳು. ಸಿಸಿಟಿವಿ ದೃಶ್ಯ ತೆಗೆಸಿ ನೋಡಿದರೆ ಗೊತ್ತಾಗುತ್ತದೆ’ ಎಂದು ಆಂತರ್ಯ ಸತೀಶ್​ (Antharya Sathish) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್