ಸಂವಿಧಾನ ಬದಲಾವಣೆಗೆ ಪ್ರಯತ್ನ ಮಾಡಿದರೆ ದೇಶದಲ್ಲಿ ರಕ್ತಪಾತ ನಡೆಯುತ್ತದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

Updated on: Mar 11, 2024 | 2:10 PM

ಬಿಜೆಪಿ ನಾಯಕರ ಹಿಡನ್ ಅಜೆಂಡಾ ಅದೇ, ತಮಗೆ ಬೇಕಿರುವದನ್ನು ಹೆಗಡೆ ಮೂಲಕ ಹೇಳಿಸುವುದು ಎಂದು ಮುಖ್ಯಮಂತ್ರಿ ಹೇಳಿದರು. ದೇಶದ ಎಲ್ಲ ಬಡವರು, ಬಲ್ಲಿದರು, ದಲಿತರು, ಹಿಂದುಳಿದ ವರ್ಗಗಳ ಜನ, ಶೋಷಿತರು, ಅಲ್ಪಸಂಖ್ಯಾತರು ಹೆಗಡೆ ಹೇಳಿಕೆಯನ್ನು ವಿರೋಧಿಸುತ್ತಾರೆ, ಅವರು ಹೇಳಿದ ಹಾಗೆ ಸಂವಿಧಾನ ಬದಲಾವಣೆಗೆ ಪ್ರಯತ್ನವೇನಾದರೂ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ

ಬೆಂಗಳೂರು: ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಸಂವಿಧಾನ (The constitution) ಬದಲಿಸುತ್ತೇವೆ ಎಂದು ಪುಃ ಹೇಳಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯರನ್ನು (Ananth Kumar Hegde) ಬಲವಾಗಿ ಖಂಡಿಸಿದರು. ಹೆಗಡೆಯವರು ಹಾಗೆ ಹೇಳಿದ್ದು ಮೊದಲ ಸಲವೇನಲ್ಲ, ಇದಕ್ಕೂ ಮೊದಲು ಅವರು ಇದೇ ಹೇಳಿಕೆ ನೀಡಿದ್ದರು. ಹಿಂದೆ ಕೇಂದ್ರದಲ್ಲಿ ಮಂತ್ರಿಯಾಗಿದ್ದಾಗ ಹೇಳಿಕೆ ನೀಡಿದ್ದಾಗಲೇ ಅವರ ವಿರುದ್ಧ ಕ್ರಮ ಜರುಗಿಸಬೇಕಿತ್ತು ಎಂದು ಸಿದ್ದರಾಮಯ್ಯ ಹೇಳಿದರು. ಅವರ ಹೇಳಿಕೆ ಮತ್ತು ತಮ್ಮ ನಡುವೆ ಸಂಬಂಧವಿಲ್ಲ, ಅದು ಅವರ ವೈಯಕ್ತಿಕ ವಿಚಾರ ಅಂತ ಬಿಜೆಪಿ ನಾಯಕರು ಹೇಳಿದರೆ ಹೇಗೆ? ಬಿಜೆಪಿ ನಾಯಕರ ಹಿಡನ್ ಅಜೆಂಡಾ ಅದೇ, ತಮಗೆ ಬೇಕಿರುವದನ್ನು ಹೆಗಡೆ ಮೂಲಕ ಹೇಳಿಸುವುದು ಎಂದು ಮುಖ್ಯಮಂತ್ರಿ ಹೇಳಿದರು. ದೇಶದ ಎಲ್ಲ ಬಡವರು, ಬಲ್ಲಿದರು, ದಲಿತರು, ಹಿಂದುಳಿದ ವರ್ಗಗಳ ಜನ, ಶೋಷಿತರು, ಅಲ್ಪಸಂಖ್ಯಾತರು ಹೆಗಡೆ ಹೇಳಿಕೆಯನ್ನು ವಿರೋಧಿಸುತ್ತಾರೆ, ಅವರು ಹೇಳಿದ ಹಾಗೆ ಸಂವಿಧಾನ ಬದಲಾವಣೆಗೆ ಪ್ರಯತ್ನವೇನಾದರೂ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಲೋಕಸಭೆ ಚುನಾವಣೆ ಬಳಿಕ ಸರ್ಕಾರ ಪತನ, ಆಗ ತಲ್ವಾರ್​ ತುದಿ ಹೇಗೆ ಜಳಪಿಸುತ್ತೆ ನೋಡಿ: ಅನಂತಕುಮಾರ್ ಹೆಗಡೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More