‘ಪದೇ ಪದೇ ಕೇಳಿ ಮುಜುಗರ ಮಾಡ್ತೀರಾ’; ‘ಮಾರ್ಟಿನ್’ ಬಗ್ಗೆ ಕೇಳಿದ್ದಕ್ಕೆ ನಿರ್ದೇಶಕನ ಅಸಮಾಧಾನ

Updated on: May 13, 2024 | 8:21 AM

‘ಮಾರ್ಟಿನ್’ ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎಪಿ ಅರ್ಜುನ್ ಆಗಮಿಸಿದ್ದರು. ಈ ವೇಳೆ ಅವರಿಗೆ ‘ಮಾರ್ಟಿನ್’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೆಲವು ವದಂತಿಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ.

ಕಸ್ಟ್ಯೂಮ್ ಡಿಸೈನರ್ ಚೇತನ್ ಅವರು ಹೊಸ ಅಂಗಡಿ ಓಪನ್ ಮಾಡಿದ್ದಾರೆ. ಇದಕ್ಕೆ ‘ಮಾರ್ಟಿನ್’ ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎಪಿ ಅರ್ಜುನ್ (AP Arjun) ಆಗಮಿಸಿದ್ದರು. ಈ ವೇಳೆ ಅವರಿಗೆ ‘ಮಾರ್ಟಿನ್’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೆಲವು ವದಂತಿಗಳ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಉತ್ತರಿಸೋಕೆ ಧ್ರುವ ಸರ್ಜಾ ನಿರಾಕರಿಸಿದ್ದಾರೆ. ಎಪಿ ಅರ್ಜುನ್ ಅವರಿಗೆ ಈ ಪ್ರಶ್ನೆಯಿಂದ ಅಸಮಾಧಾನ ಆಗಿದೆ. ‘ಪದೇ ಪದೇ ಪ್ರಶ್ನೆ ಕೇಳಿ ಏಕೆ ಮುಜುಗರ ಮಾಡ್ತೀರಾ. ‘ಶೂಟಿಂಗ್ ಮುಗಿಸಿದ್ದೇವೆ. ಸಿಜಿ ಕೆಲಸ ಬಾಕಿ ಇದೆ. ಅದನ್ನು ಮುಗಿಸಿ ನಾವು ಸಿನಿಮಾ ರಿಲೀಸ್ ದಿನಾಂಕ ತಿಳಿಸುತ್ತೇವೆ. ಜನರಿಗೋಸ್ಕರ ಸಿನಿಮಾ ಮಾಡಿರೋದು. ಅದನ್ನು ತೋರಿಸಿಯೇ ತೋರಿಸುತ್ತೇವೆ, ಅದೂ ಈ ವರ್ಷವೇ’ ಎಂದಿದ್ದಾರೆ ಅರ್ಜುನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More