ದೇಶದಲ್ಲಿ ಮಹಾತ್ಮಾ ಗಾಂಧಿಯನ್ನು ಬಿಟ್ಟರೆ ಕುಮಾರಸ್ವಾಮಿ ಮಾತ್ರ ಸತ್ಯವಂತ: ಎನ್ ಚಲುವರಾಯಸ್ವಾಮಿ, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Feb 08, 2024 | 2:12 PM

ಅವರು ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಬಗ್ಗೆ ಏನೆಲ್ಲ ಮಾತಾಡುತ್ತಿದ್ದರೋ ಈಗಲೂ ಅದನ್ನೇ ಮಾತಾಡುತ್ತಿದ್ದಾರೆ ಅವರು ಹೇಳಿದ್ದೆಲ್ಲ ಕರೆಕ್ಟ್ ನಾವು ಹೇಳೋದು ತಪ್ಪು ಅಂತ ಸಚಿವ ಕುಹಕವಾಡಿದರು. ಅವರಿಗೆ ಯಾರ ಮಾರ್ಗದರ್ಶನವೂ ಬೇಕಿಲ್ಲ, ಒಬ್ಬರೇ ಎಲ್ಲ ನಿರ್ಧಾರಗಳನ್ನೂ ತೆಗೆದುಕೊಳ್ಳುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು

ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರಿಗೆ (N Cheluvarayaswamy) ತಮ್ಮ ಹಳೆಯ ದೋಸ್ತಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ಮಾತಾಡುವುದೆಂದರೆ ಎಲ್ಲಿಲ್ಲದ ಖುಷಿ. ಕುಮಾರಸ್ವಾಮಿ ಸಹ ಹಾಗೇನೇ! ಚಲುವರಾಯಸ್ವಾಮಿಗೆ ಕುಮಾರಸ್ವಾಮಿ ಬಗ್ಗೆ ಕೆಳೋದು ಮತ್ತು ಕುಮಾರಸ್ವಾಮಿಗೆ ಸಚಿವನ ಬಗ್ಗೆ ಕೇಳೋದು ಸಹ ಮಾಧ್ಯಮ ಪ್ರತಿನಿಧಿಗಳಿಗೆ ರೂಟೀನ್ ಆಗಿಬಿಟ್ಟಿದೆ. ಇವತ್ತು ಮಂಡ್ಯದಲ್ಲಿ ಪತ್ರಕರ್ತರು ಕುಮಾರಸ್ವಾಮಿಯವರ ಯಾವುದೋ ಒಂದು ಟೀಕೆy ಬಗ್ಗೆ ಕೃಷಿಮಂತ್ರಿಯ ಗಮನ ಸೆಳೆದಾಗ ಅವರು, ಜೆಡಿಎಸ್ ರಾಜ್ಯಾಧ್ಯಕ್ಷನ ಹೆಸರು ಪ್ರಸ್ತಾಪಿಸಿದೆ, ಅವರು ಭಾರಿ ಸತ್ಯವಂತರು, ನಮ್ಮ ದೇಶದಲ್ಲಿ ಮಹಾತ್ಮಾ ಗಾಂಧಿಯವರ (Mahatma Gandhi) ನಂತರ ಯಾರಾದರೂ ಸತ್ಯವಂತರಿದ್ದರೆ ಅದು ಅವರು ಮಾತ್ರ ಎಂದರು. ಅವರು ಬಾಯಿಂದ ಕುಮಾರಸ್ವಾಮಿ ಅನ್ನಿಸಬೇಕೆಂಬ ಉದ್ದೇಶದಿಂದ ಪತ್ರಕರ್ತರೊಬ್ಬರು, ‘ಯಾರು ಸರ್?’ ಅಂತ ಕೇಳಿದಾಗ ತಮ್ಮ ಎಂದಿನ ರಾಜಕೀಯ ಪರಿಣಿತಿ ಪ್ರದರ್ಶಿಸಿದ ಚಲುವರಾಯಸ್ವಾಮಿ, ‘ಅದೇ ನೀವು ಹೇಳಿದ್ರಲ್ಲ, ಅವರೇ’ ಅನ್ನುತ್ತಾರೆ! ಅವರು ಹಿಂದೆ ಆರೆಸ್ಸೆಸ್ ಮತ್ತು ಬಿಜೆಪಿ ಬಗ್ಗೆ ಏನೆಲ್ಲ ಮಾತಾಡುತ್ತಿದ್ದರೋ ಈಗಲೂ ಅದನ್ನೇ ಮಾತಾಡುತ್ತಿದ್ದಾರೆ ಅವರು ಹೇಳಿದ್ದೆಲ್ಲ ಕರೆಕ್ಟ್ ನಾವು ಹೇಳೋದು ತಪ್ಪು ಅಂತ ಸಚಿವ ಕುಹಕವಾಡಿದರು. ಅವರಿಗೆ ಯಾರ ಮಾರ್ಗದರ್ಶನವೂ ಬೇಕಿಲ್ಲ, ಒಬ್ಬರೇ ಎಲ್ಲ ನಿರ್ಧಾರಗಳನ್ನೂ ತೆಗೆದುಕೊಳ್ಳುತ್ತಾರೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.