ಅಪೆಕ್ಸ್ ಬ್ಯಾಂಕ್ ಪಟ್ಟಕ್ಕೆ ಪೈಪೋಟಿ: ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ. ಸದ್ಯ ಶತಾಗತಯಾಗಿ ಅಪೆಕ್ಸ್ ಬ್ಯಾಂಕ್ಗೆ ಮತ್ತೊಮ್ಮೆ ಅಧ್ಯಕ್ಷರಾಗಲು ಕೆಎನ್ ರಾಜಣ್ಣ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ದೆಹಲಿಯಲ್ಲಿ ಇಂದು (ಸೆಪ್ಟೆಂಬರ್ 08) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ.
ಬೆಂಗಳೂರು, (ಸೆಪ್ಟೆಂಬರ್ 08): ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬಣದ ರಾಜಕೀಯ ಹಣಾಹಣಿಗೆ ವೇದಿಕೆಯಾಗುವ ಸಾಧ್ಯತೆ ಇದೆ. ಸದ್ಯ ಶತಾಗತಯಾಗಿ ಅಪೆಕ್ಸ್ ಬ್ಯಾಂಕ್ಗೆ ಮತ್ತೊಮ್ಮೆ ಅಧ್ಯಕ್ಷರಾಗಲು ಕೆಎನ್ ರಾಜಣ್ಣ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ರಾಜಣ್ಣ ಅವರು ದೆಹಲಿಯಲ್ಲಿ ಇಂದು (ಸೆಪ್ಟೆಂಬರ್ 08) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಚುನಾವಣೆ ಮಹತ್ವ ಪಡೆದುಕೊಂಡಿರುವುದಕ್ಕೆ ಈ ಹಿಂದೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಪ್ರಯತ್ನದ ವೇಳೆ ಡಿ ಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವೆ ಉಂಟಾಗಿದ್ದ ರಾಜಕೀಯ ಸಂಘರ್ಷವೂ ಕಾರಣವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
