ಹುಬ್ಬಳ್ಳಿ: ಬಿಪಿಎಲ್-ಎಪಿಎಲ್ ಗೊಂದಲ, ಆಹಾರ ಮತ್ತು ನಾಗರಿಕ ಪೂರೈಕೆ ಕಚೇರಿಗೆ ಜನ ಲಗ್ಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 7:43 PM

ಬಿಪಿಎಲ್ ಕಾರ್ಡ್​ಗಳು ಎಪಿಎಲ್ ಅಂತ ಪರಿಗಣನೆಗೆ ಬಂದಿರೋದು ಬಡ ಕುಟುಂಬಗಳಲ್ಲಿ ಅತಂಕ ಹುಟ್ಟಿಸಿದೆ. ಅದು ಅವರನ್ನು ಹಲವು ಸೌಲಭ್ಯಗಳಿಂದ ವಂಚಿತವಾಗಿಸುತ್ತದೆ. ನಿಗದಿತ ಮಿತಿಗಿಂತ ಹೆಚ್ಚು ಆದಾಯ ಇರುವ ಕುಟುಂಬಗಳ ಬಿಪಿಎಲ್ ಕಾರ್ಡ್​ಗಳನ್ನು ಮಾತ್ರ ಎಪಿಎಲ್ ಅಂತ ಘೋಷಿಸಲಾಗುತ್ತಿದೆ ಅಂತ ಸರ್ಕಾರ ಹೇಳುತ್ತಿದ್ದರೂ ಜನರಲ್ಲಿ ಅಸಮಾಧಾನ ಹುಟ್ಟಿಕೊಂಡಿದೆ.

ಹುಬ್ಬಳ್ಳಿ: ನಗರದ ಆಹಾರ ಮತ್ತು ನಾಗರಿಕ ಪೂರೈಕೆ ಕಚೇರಿಯಲ್ಲಿ ಕಂಡುಬಂದ ದೃಶ್ಯವಿದು. ಗೃಹಲಕ್ಷ್ಮಿ, ಅನ್ನಭಾಗ್ಯ ಮತ್ತು ವೈದ್ಯಕೀಯ ಸೌಲಭ್ಯ ಪಡೆಯಲು ಅಗತ್ಯವಿರುವ ಬಿಪಿಎಲ್ ಕಾರ್ಡುಗಳ ಪರಿಷ್ಕರಣೆಯನ್ನು ಸರ್ಕಾರ ಮಾಡುತ್ತಿದ್ದು ಹಲವಾರು ಕುಟುಂಬಗಳ ಕಾರ್ಡ್​ಗಳನ್ನು ಎಪಿಎಲ್ ಎಂದು ಪರಿಗಣಿಸಲಾಗುತ್ತಿದೆ. ಪಡಿತರ ಅಂಗಡಿಗೆ ಅಕ್ಕಿ ತೆಗೆದುಕೊಳ್ಳಲು ಹೋದಾಗ ಜನರಿಗೆ ತಮ್ಮ ಕಾರ್ಡ್​ ಎಪಿಎಲ್ ಅಂತಾಗಿದ್ದು ಗೊತ್ತಾಗಿದೆ. ಹಾಗಾಗಿ ಅವರು ಯಾಕೆ ಕಾರ್ಡ್ ಬದಲಾಗಿದೆ ಅಂತ ಅರಿಯಲು ಕಚೇರಿಗೆ ಬಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಿಗದಿತ ಮಿತಿಗಿಂತ ಅದಾಯ ಜಾಸ್ತಿಯಿರುವ ಕುಟುಂಬಗಳ ಬಿಪಿಎಲ್ ಕಾರ್ಡುಗಳು ಮಾತ್ರ ರದ್ದಾಗಿವೆ: ಸಂತೋಷ್ ಲಾಡ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.