ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ಮಾತಾಡಿ ಆರಗ ಜ್ಞಾನೇಂದ್ರ ತಮ್ಮ ಕೀಳು ಹಾಗೂ ಹತಾಶ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ: ಈಶ್ವರ್ ಖಂಡ್ರೆ

ಖರ್ಗೆ ಸಾಹೇಬರನ್ನು ಕುರಿತು ಕೀಳಾಗಿ ಮಾತಾಡಿರುವ ಜ್ಞಾನೇಂದ್ರ ಕೇವಲ ಕಲ್ಯಾಣ ಕರ್ನಾಟಕ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ ಎಂದು ಖಂಡ್ರೆ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ಮಾತಾಡಿ ಆರಗ ಜ್ಞಾನೇಂದ್ರ ತಮ್ಮ ಕೀಳು ಹಾಗೂ ಹತಾಶ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ: ಈಶ್ವರ್ ಖಂಡ್ರೆ
|

Updated on: Aug 02, 2023 | 4:40 PM

ದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಮೈಬಣ್ಣದ ಬಗ್ಗೆ ಮಾತಾಡಿ ವಿವಾದ ಸೃಷ್ಟಿಸಿರುವ ಬಿಜೆಪಿ ನಾಯಕ ಆರಗ ಜ್ಞಾನೇಂದ್ರ (Araga Jnanendra) ಅವರನ್ನು ಸಚಿವ ಈಶ್ವರ್ ಖಂಡ್ರೆ (Eshwar Khandre) ಕಟುವಾಗಿ ಟೀಕಿಸಿದರು. ದೆಹಲ್ಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡುವ ಮೂಲಕ ಜ್ಞಾನೇಂದ್ರ ತಮ್ಮ ಮನಸ್ಥಿತಿ ಮತ್ತು ಹತಾಶೆಯನ್ನು ಪ್ರದರ್ಶಿಸಿದ್ದಾರೆ. ಬಿಜೆಪಿ ನಾಯಕರು ಜಾತಿವಾದಿಗಳು, ಜನಾಂಗವಾದಿಗಳು ಅನ್ನೋದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ಖರ್ಗೆ ಸಾಹೇಬರನ್ನು ಕುರಿತು ಕೀಳಾಗಿ ಮಾತಾಡಿರುವ ಜ್ಞಾನೇಂದ್ರ ಕೇವಲ ಕಲ್ಯಾಣ ಕರ್ನಾಟಕ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ ಮತ್ತು ಬಿಜೆಪಿ ಇಂಥ ಕೀಳು ಅಭಿರುಚಿಯ ನಾಯಕನನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಖಂಡ್ರೆ ಕೋಪದಿಂದ ಭುಸುಗುಡುತ್ತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us