ಬಜೆಟ್ ಮಂಡನೆಯಾದ ಬಳಿಕ ಸಿದ್ದರಾಮಯ್ಯರ ಕೋಣೆಗೆ ತೆರಳಿ ಮಾತುಕತೆ ನಡೆಸಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Feb 17, 2023 | 5:27 PM

ಪ್ರಾಯಶಃ ಅದಕ್ಕೆ ಪೂರ್ವಭಾವಿಯಾಗೇ ಇಂದು ಗೌಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕೋಣೆಗೆ ತೆರಳಿ ಮಾತುಕತೆ ನಡೆಸಿದರು

ಬೆಂಗಳೂರು: ಅರಸೀಕೆರೆ ಶಾಸಕ ಕೆಎಮ್ ಶಿವಲಿಂಗೇಗೌಡರ (KM Shivalingegowda) ಜೆಡಿಎಸ್ ದಿನಗಳು ಆಲ್ಮೋಸ್ಟ್ ಕೊನೆಗೊಂಡಿವೆ ಮಾರಾಯ್ರೇ. ಪಕ್ಷದ ವರಿಷ್ಠರ ಧೋರಣೆಯಿಂದ ಅವರು ಬೇಸತ್ತ ವಿಷಯ ಜಗಜ್ಜಾಹೀರುಗೊಂಡು ಬಹಳ ದಿನ ಕಳೆದವು. ಅವರು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಪಕ್ಷವನ್ನು ಇಷ್ಟರಲ್ಲೇ ಸೇರಲಿದ್ದಾರೆ. ಪ್ರಾಯಶಃ ಅದಕ್ಕೆ ಪೂರ್ವಭಾವಿಯಾಗೇ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕೋಣೆಗೆ ತೆರಳಿ ಮಾತುಕತೆ ನಡೆಸಿದರು. ಮಾತುಕತೆಯ ವಿವರ ನಮಗೆ ಗೊತ್ತಾಗಿಲ್ಲ, ಆದರೆ ಶಿವಲಿಂಗೇಗೌಡರು ಸಿದ್ದರಾಮಯ್ಯನವರ ಕೋಣೆ ಪ್ರವೇಶಿಸುವ ವಿಡಿಯೋ ನಮಗೆ ಲಭ್ಯವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.