ಕೋಟಿ ರಾಮು ನಿರ್ಮಾಣದ ‘ಅರ್ಜುನ್​ ಗೌಡ’ ಪತ್ರಿಕಾಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Edited By:

Updated on: Dec 19, 2021 | 5:01 PM

ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 19) ನಡೆಯುತ್ತಿದೆ.

ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ ರಾಮು (Koti Ramu) ಅವರ ಹೆಸರಿನ ಜತೆ ‘ಕೋಟಿ’ ಎಂಬ ವಿಶೇಷಣ ಕೂಡ ಸೇರಿಕೊಂಡಿತ್ತು. ಸಿನಿಮಾ ಮೇಲೆ ಅವರಿಗೆ ಅಷ್ಟರಮಟ್ಟಿಗೆ ಪ್ರೀತಿ ಇತ್ತು. ಅನೇಕ ಸೂಪರ್​ ಹಿಟ್​ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ರಾಮು ನಿರ್ಮಿಸಿದ ಸಾಹಸ ಪ್ರಧಾನ ಚಿತ್ರಗಳು ಜನಮನ ಗೆದ್ದಿದ್ದು ಈಗ ಇತಿಹಾಸ. ಕೊರೊನಾದಿಂದ ಈ ವರ್ಷ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ರಾಮು ನಿಧನದಿಂದ ಅವರ ಪತ್ನಿ ಮಾಲಾಶ್ರೀ (Malashree) ಕಂಗೆಟ್ಟಿದ್ದರು. ಈಗ ಪತಿಯ ಕನಸನ್ನು ನನಸು ಮಾಡಲು ಅವರು ಮುಂದೆ ಬಂದಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ‘ಅರ್ಜುನ್​ ಗೌಡ’ (Arjun Gowda Movie) ತೆರೆಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದಾರೆ. ಈ ಚಿತ್ರಕ್ಕೆ ಪ್ರಜ್ವಲ್​ ದೇವರಾಜ್​ (Prajwal Devaraj) ನಾಯಕ. ಈ ಸಿನಿಮಾದ ಪತ್ರಿಕಾಗೋಷ್ಠಿ ಇಂದು (ಡಿಸೆಂಬರ್ 19) ನಡೆಯುತ್ತಿದೆ.

ಇದನ್ನೂ ಓದಿ: Pushpa Collection: ವಿಶ್ವ ಮಟ್ಟದಲ್ಲಿ ಎರಡು ದಿನಕ್ಕೆ 116 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಪುಷ್ಪ’

Follow Us
Web contact

TV9 Kannada

Read More